ರಾಜಕೀಯ ಬದಲಾವಣೆಯಿಂದ ಅಭಿವೃದ್ದಿ ಸಾಧ್ಯ
ಲೋಕದರ್ಶನ ವರದಿ
ಗೋಕಾಕ 24: ರಾಜಕೀಯ ಬದಲಾವಣೆಯಿಂದ ಅಭಿವೃದ್ದಿ ಸಾಧ್ಯ, ಈ ಬಾರಿ ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಿ ಕ್ಷೇತ್ರದ ಅಭಿವೃದ್ದಿಗೆ ಅವಕಾಶ ಕಲ್ಪಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಬುಧವಾರದಂದು ರಾತ್ರಿ, ನಗರದ ಸೋಮವಾರ ಪೇಠ ಹಾಗೂ ಮರಾಠಾ ಗಲ್ಲಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಕೆಲವೇ ವ್ಯಕ್ತಿಗಳ ಕಪಿಮುಷ್ಠಿಯಲ್ಲಿ ಸಿಲುಕಿ ನಗರ ಅಭಿವೃದ್ದಿಯಲ್ಲಿ ವಿಮುಖವಾಗಿದೆ. ಅಭಿವೃದ್ದಿಗಾಗಿ ಕಾಂಗ್ರೇಸ್ ಅಭ್ಯರ್ಥಿ ಲಖನ ಜಾರಕಿಹೊಳಿ ಅವರನ್ನು ಬೆಂಬಲಿಸಿ ರಾಜಕೀಯ ಶಕ್ತಿಯನ್ನು ನೀಡುವಂತೆ ವಿನಂತಿಸಿದರು.
ಕಾಂಗ್ರೇಸ್ ಮುಖಂಡ ಲಖನ ಜಾರಕಿಹೊಳಿ ಅವರು ಮಾತನಾಡಿ, ಅಭಿವೃದ್ದಿ ಕಾರ್ಯಗಳನ್ನು ಮಾಡುವವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ. ನಗರಾಭಿವೃದ್ದಿಗೆ ಇಲ್ಲಿಯ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕಾಂಗ್ರೇಸ್ನ ಭದ್ರಕೋಟೆಯಾದ ಗೋಕಾಕ ಮತಕ್ಷೇತ್ರದಲ್ಲಿ ತಮ್ಮ ಮತದೊಂದಿಗೆ ಆಶಿರ್ವದಿಸಿ ತಮ್ಮ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಪ್ರಕಾಶ ಮುರಾರಿ, ಲಕ್ಷ್ಮೀ ದೇಶನೂರ, ಭಗವಂತ ಹುಳ್ಳಿ, ಮುಖಂಡರಾದ ದಶರಥ ಗುಡ್ಡದಮನಿ, ಫಕೀರಪ್ಪ ತೇರದಾಳ, ಪ್ರಭಾಕರ ಚವ್ಹಾಣ, ಬಸವರಾಜ ದೇಶನೂರ, ಮಲ್ಲಿಕಾರ್ಜುನ ಹೊಸಪೇಟೆ, ಬಸವರಾಜ ಸಾಯಣ್ಣವರ, ರಂಗನಾಥ ಸಾತಪುತೆ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 