ಬೆಳಗಾವಿ ಮಾದರಿಯಲ್ಲಿ ಸಂತಿ ಬಸ್ತವಾಡ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Development of Santi Bastawada on the model of Belgaum: Minister Lakshmi Hebbalkar
ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಹೇಳಿಕೆ
ಬೆಳಗಾವಿ 14: ಬೆಳಗಾವಿ ನಗರದ ಮಾದರಿಯಲ್ಲಿ ಸಂತಿ ಬಸ್ತವಾಡ ಗ್ರಾಮ ಅಭಿವೃದ್ಧಿಯಾಗುತ್ತಿದೆ. ನಾನು ಶಾಸಕಿಯಾದ ಬಳಿಕ ಈ ಗ್ರಾಮ ಸಮಗ್ರ ಅಭಿವೃದ್ಧಿ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಂತಿ ಬಸ್ತವಾಡ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಸಂತಿ ಬಸ್ತವಾಡ ಮೊದಲು ಹೇಗಿತ್ತು, ಈಗ ಹೇಗಾಗಿದೆ ನೀವೆ ನೋಡಿ, ದೇವಸ್ಥಾನಗಳು ಚರ್ಚ, ಮಸೀದಿಗಳ ಅಭಿವೃದ್ಧಿಗೆ ಹಣ ನೀಡಿರುವೆ ಎಂದರು. ವಿಶೇಷ ಕಾಳಜಿಯಿಂದ ಸುಮಾರು 33 ಲಕ್ಷ ರೂಪಾಯಿ ವೆಚ್ಚದಲ್ಲಿ, ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಗ್ರಾಮಸ್ಥರ ಹಾಗೂ ಆ ದೇವರ ಆಶೀರ್ವಾದದಿಂದ ಇವತ್ತು ಕರ್ನಾಟಕದ ಏಳೂವರೆ ಕೋಟಿ ಜನಸಂಖ್ಯೆಯಲ್ಲಿ ಒಬ್ಬಳೇ ನಾನು ಮಹಿಳಾ ಮಂತ್ರಿಯಾಗಿರುವೆ. ನನ್ನ ಇಲಾಖೆಯ ವ್ಯಾಪ್ತಿಗೆ ಬರುವ ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 30 ಸಾವಿರ ಕೋಟಿ ರೂ ನೀಡಲಾಗುತ್ತಿದೆ. ಇಂಥ ಬಹುದೊಡ್ಡ ಜವಾಬ್ದಾರಿ ಸಿಗಲು ನಿಮ್ಮೆಲ್ಲರ ಆಶೀರ್ವಾದವೇ ಕಾರಣ ಎಂದರು.
ಪುನರ್ಜನ್ಮ ಪಡೆದಿರುವೆ: ಕಳೆದ ಜನವರಿ ತಿಂಗಳಲ್ಲಿ ದೊಡ್ಡ ಅಪಘಾತದಿಂದ ಪಾರಾಗಿ ಬಂದಿರುವೆ. ಆ ಪರಿಸ್ಥಿತಿ, ಆ ಗಾಡಿ ಪರಿಸ್ಥಿತಿ ನೋಡಿದರೆ ನಾನು ವಾಪಸ್ ಬಂದಿದ್ದೆ ಹೆಚ್ಚು, ಇದಕ್ಕೆ ದೇವರ ಆಶೀರ್ವಾದವೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ವೇಳೆ ಬಡೇಕೊಳ್ಳಿಮಠದ ಶ್ರೀ ನಾಗಯ್ಯ ಅಜ್ಜನವರು, ಯುವರಾಜ ಕದಂ, ಎಸಿಪಿ ಗಂಗಾಧರ್ ಮಠಪತಿ, ಆಶ್ಪಾಕ್ ತಹಶಿಲ್ದಾರ, ಶಿವಾಜಿ ಬಸ್ತವಾಡಕರ್, ಮೃಣಾಲ್ ಹೆಬ್ಬಾಳಕರ್, ದ್ಯಾಮಣ್ಣ ನಾಯಿಕ್, ಜ್ಯೋತಿಬಾ ದೆರವಶಿ, ನಾಗೇಂದ್ರ ಬುಡರಿ, ಅಜಯ ಚಿನಕುಪ್ಪಿ, ಚನ್ನವೀರ ಪೂಜೇರಿ, ಬಾಬಾಜಿ ಪಾವಸೆ, ಬಸು ಬಿರಮೂತಿ, ಗ್ರಾಮದ ನೂರಾರು ಮಹಿಳೆಯರು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 