ಬೆಳಗಾವಿ ಮಾದರಿಯಲ್ಲಿ ಸಂತಿ ಬಸ್ತವಾಡ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Development of Santi Bastawada on the model of Belgaum: Minister Lakshmi Hebbalkar
ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಹೇಳಿಕೆ
ಬೆಳಗಾವಿ 14: ಬೆಳಗಾವಿ ನಗರದ ಮಾದರಿಯಲ್ಲಿ ಸಂತಿ ಬಸ್ತವಾಡ ಗ್ರಾಮ ಅಭಿವೃದ್ಧಿಯಾಗುತ್ತಿದೆ. ನಾನು ಶಾಸಕಿಯಾದ ಬಳಿಕ ಈ ಗ್ರಾಮ ಸಮಗ್ರ ಅಭಿವೃದ್ಧಿ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಂತಿ ಬಸ್ತವಾಡ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಸಂತಿ ಬಸ್ತವಾಡ ಮೊದಲು ಹೇಗಿತ್ತು, ಈಗ ಹೇಗಾಗಿದೆ ನೀವೆ ನೋಡಿ, ದೇವಸ್ಥಾನಗಳು ಚರ್ಚ, ಮಸೀದಿಗಳ ಅಭಿವೃದ್ಧಿಗೆ ಹಣ ನೀಡಿರುವೆ ಎಂದರು. ವಿಶೇಷ ಕಾಳಜಿಯಿಂದ ಸುಮಾರು 33 ಲಕ್ಷ ರೂಪಾಯಿ ವೆಚ್ಚದಲ್ಲಿ, ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಗ್ರಾಮಸ್ಥರ ಹಾಗೂ ಆ ದೇವರ ಆಶೀರ್ವಾದದಿಂದ ಇವತ್ತು ಕರ್ನಾಟಕದ ಏಳೂವರೆ ಕೋಟಿ ಜನಸಂಖ್ಯೆಯಲ್ಲಿ ಒಬ್ಬಳೇ ನಾನು ಮಹಿಳಾ ಮಂತ್ರಿಯಾಗಿರುವೆ. ನನ್ನ ಇಲಾಖೆಯ ವ್ಯಾಪ್ತಿಗೆ ಬರುವ ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 30 ಸಾವಿರ ಕೋಟಿ ರೂ ನೀಡಲಾಗುತ್ತಿದೆ. ಇಂಥ ಬಹುದೊಡ್ಡ ಜವಾಬ್ದಾರಿ ಸಿಗಲು ನಿಮ್ಮೆಲ್ಲರ ಆಶೀರ್ವಾದವೇ ಕಾರಣ ಎಂದರು.
ಪುನರ್ಜನ್ಮ ಪಡೆದಿರುವೆ: ಕಳೆದ ಜನವರಿ ತಿಂಗಳಲ್ಲಿ ದೊಡ್ಡ ಅಪಘಾತದಿಂದ ಪಾರಾಗಿ ಬಂದಿರುವೆ. ಆ ಪರಿಸ್ಥಿತಿ, ಆ ಗಾಡಿ ಪರಿಸ್ಥಿತಿ ನೋಡಿದರೆ ನಾನು ವಾಪಸ್ ಬಂದಿದ್ದೆ ಹೆಚ್ಚು, ಇದಕ್ಕೆ ದೇವರ ಆಶೀರ್ವಾದವೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ವೇಳೆ ಬಡೇಕೊಳ್ಳಿಮಠದ ಶ್ರೀ ನಾಗಯ್ಯ ಅಜ್ಜನವರು, ಯುವರಾಜ ಕದಂ, ಎಸಿಪಿ ಗಂಗಾಧರ್ ಮಠಪತಿ, ಆಶ್ಪಾಕ್ ತಹಶಿಲ್ದಾರ, ಶಿವಾಜಿ ಬಸ್ತವಾಡಕರ್, ಮೃಣಾಲ್ ಹೆಬ್ಬಾಳಕರ್, ದ್ಯಾಮಣ್ಣ ನಾಯಿಕ್, ಜ್ಯೋತಿಬಾ ದೆರವಶಿ, ನಾಗೇಂದ್ರ ಬುಡರಿ, ಅಜಯ ಚಿನಕುಪ್ಪಿ, ಚನ್ನವೀರ ಪೂಜೇರಿ, ಬಾಬಾಜಿ ಪಾವಸೆ, ಬಸು ಬಿರಮೂತಿ, ಗ್ರಾಮದ ನೂರಾರು ಮಹಿಳೆಯರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 