ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ: ಶಾಸಕ ವಿಶ್ವಾಸ ವೈದ್ಯ
Development of the constituency is my first priority: MLA Vishwas Vaidya
ಸವದತ್ತಿ 14 : ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಸದಾ ಬದ್ಧನಾಗಿದ್ದು, ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಸೇವೆಯೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಹೇಳಿದರು. ನಗರದ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ನಂತರ ಮಾತನಾಡಿ ನಾನು ಈ ಮಣ್ಣಿನ ಮಗನಾಗಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತೇನೆ. ಕ್ಷೇತ್ರದ ನಾಗರಿಕರು ಯಾವುದೇ ಸಮಸ್ಯೆಗಳಿದ್ದರೂ ಯಾವುದೇ ಮುಜುಗರವಿಲ್ಲದೆ ನೇರವಾಗಿ ನನ್ನನ್ನು ಸಂಪರ್ಕಿಸಬಹುದು.
ನಿಮ್ಮ ಸೇವೆ ಮಾಡಲು ನಾನು ಸದಾ ಸಿದ್ಧನಿದ್ದೇನೆ, ಎಂದು ಭರವಸೆ ನೀಡಿದರು.ಬಡ ಕುಟುಂಬಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿದ ಅವರು ಏಳಿಗೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಅಲ್ಲದೆ, ಬಡ ಕುಟುಂಬಗಳ ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಅವರಿಗೆ ಬೆಂಬಲ ನೀಡುವ ಭರವಸೆಯನ್ನೂ ನೀಡಿದರು. ಈ ಸಂದರ್ಭದಲ್ಲಿ ಶಿವಾನಂದ ಹೂಗಾರ, ವೀರಭದ್ರ ಪಟ್ಟಣಶೆಟ್ಟಿ, ಪ್ರವೀಣ ರಾಮಪ್ಪನವರ, ಶಿವಕುಮಾರ್ ರಾಠೋಡ್, ಮಲ್ಲು ಜಕಾತಿ, ಜಗದೀಶ್ ಶಿರಸಂಗಿ, ನಿಂಗಪ್ಪ ಹಾದಿಮನಿ, ಸುರೇಶ ತುಪ್ಪದ, ಮಹಮ್ಮದ್ ದೊಡಮನಿ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 