ಬಿಜೆಪಿ ಶಾಸಕಾಂಗ ಪಕ್ಷ ನಾಯಕರಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ
Devendra Fadnavis elected as BJP Legislature Party Leader
ಮುಂಬೈ 04: ವಾರಗಳ ನಂತರ ಮಹಾರಾಷ್ಟ್ರ ಸರ್ಕಾರ ರಚನೆಗೆ ತಾರ್ಕಿಕ ಅಂತ್ಯ ಕಾಣುತ್ತಿದೆ. ಇಂದು ಬುಧವಾರ ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಅವರ ಹಾದಿ ಸುಗಮವಾಗಿದೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಅವರ ಹೆಸರನ್ನು ಶಾಸಕ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಲಾಯಿತು. ಮುಂಬೈನ ವಿಧಾನ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಉಪಸ್ಥಿತರಿದ್ದರು. ಈ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಬಿಜೆಪಿ ನೇಮಿಸಿತ್ತು.
ಶಿಂಧೆ ಮತ್ತು ಫಡ್ನವಿಸ್ ನಡುವೆ ನಿನ್ನೆ ನಡೆದ ಒಂದು ಗಂಟೆ ಅವಧಿಯ ಸಭೆಯ ವಿವರಗಳು ಅಸ್ಪಷ್ಟವಾಗಿದ್ದರೂ, ಕೆಲವು ರಾಜಕೀಯ ವೀಕ್ಷಕರು ಇದನ್ನು ಬಿಜೆಪಿಯು ಶಿವಸೇನೆ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನವೆಂದು ಹೇಳಿದ್ದಾರೆ. ಆದರೆ ಇದು ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭ ಕುರಿತು ಎಂದು ಹೇಳಲಾಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 