ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ
Devotees from Betageri embark on a trek to the Sukshetra Shirasangi Kalammadevi Temple
ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ
ಬೆಟಗೇರಿ, 27; ಪ್ರತಿಯೊಬ್ಬರೂ ಶ್ರೀದೇವಿ ನಾಮಸ್ಮರಣೆ ಮಾಡಿ ಕಾಳಮ್ಮದೇವಿಯ ಕೃಪೆಗೆ ಪಾತ್ರರಾಗಬೇಕು. ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ಶಕ್ತಿದೇವತೆಯಾಗಿದ್ದಾಳೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯುವಧುರೀಣ ಶಿವರಾಜ ಪತ್ತಾರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಿರಸಂಗಿ ಕಾಳಮ್ಮದೇವಿ ಸದ್ಭಭಕ್ತರು ಸವದತ್ತಿ ತಾಲೂಕಿನ ಸುಕ್ಷೇತ್ರ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಯುಗಾದಿ ಹಬ್ಬದ ಪ್ರಯುಕ್ತ ಮಾ.27 ರಂದು ಹಮ್ಮಿಕೊಂಡ ಪಾದಯಾತ್ರೆಗೆ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದಲ್ಲಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುಗಾದಿ ಹಬ್ಬದ ಪ್ರಯುಕ್ತ ಶ್ರೀದೇವಿ ದೇವಾಲಯಕ್ಕೆ ಸ್ಥಳೀಯ ಯುವಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದರು.
ಸ್ಥಳೀಯ ಶಿರಸಂಗಿ ಕಾಳಮ್ಮದೇವಿ ಪಾದಯಾತ್ರೆ ಕಾರ್ಯಕ್ರಮದ ವ್ಯವಸ್ಥಾಪಕ ಸಮಿತಿ ಸಂಚಾಲಕ ವಿಠಲ ಬಡಿಗೇರ ಮಾತನಾಡಿ, ನೂರಾರು ಜನ ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಬೆಟಗೇರಿ ಗ್ರಾಮದಿಂದ ಅಕ್ಕಿಸಾಗರ ಮಾರ್ಗವಾಗಿ ಪಾದಯಾತ್ರೆ ನಡೆದು ಯರಗಟ್ಟಿ ನಗರದಲ್ಲಿ ಮಾ.27ರಂದು ವಾಸ್ತವ್ಯ ಮಾಡಿ, ಮಾ.29ರಂದು ಬೆಳಗ್ಗೆ ಶಿರಸಂಗಿ ಕಾಳಮ್ಮದೇವಿ ದೇವಾಲಯಕ್ಕೆ ಪಾದಯಾತ್ರೆ ತಲುಪಲಿದೆ ಎಂದು ತಿಳಿಸಿದರು.
ಮಹೇಶ ಪತ್ತಾರ, ಬಸವರಾಜ ಬಡಿಗೇರ, ಬಸವರಾಜ ಕಂಬಾರ, ಪರಶುರಾಮ ಬಡಿಗೇರ, ಮಲ್ಲಿಕಾರ್ಜುನ ಕಂಬಾರ, ಶಿವಾನಂದ ಪತ್ತಾರ, ಪ್ರವೀಣ ಪತ್ತಾರ ಸೇರಿದಂತೆ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಸದಸ್ಯರು, ಯುವಕರು, ಭಕ್ತರು ಇದ್ದರು.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 