ಹೊಳಗುಂದಿಯಲ್ಲಿ ಕೆಂಡ ತುಳಿದು ಹರಕೆ ತೀರಿಸಿದ ಭಕ್ತರು
ಹೂವಿನಹಡಗಲಿ: ತಾಲ್ಲೂಕಿನ ಹೊಳಗುಂದಿಯಲ್ಲಿ ಶನಿವಾರ ಬೆಳಿಗ್ಗೆ 11ಗಂಟೆಗೆ ವೀರಭದ್ರೇಶ್ವರ ಸ್ವಾಮಿಯ ಅಗ್ನಿ ಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತುಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಸಮಾಳ, ನಂದಿಕೋಲು, ಮಂಗಳ ವಾದ್ಯಗಳ ಭವ್ಯ ಮೆರವಣಿಗೆಯಲ್ಲಿ ಕರೆತರಲಾಯಿತು. ಇದೇ ವೇಳೆ ಪುರವಂತರು ಸ್ವಾಮಿಯ ಮಹಿಮೆಯನ್ನು ವಡಪುಗಳನ್ನು ಹೇಳುತ್ತಾ ಕಲಾ ಪ್ರದರ್ಶನ ನೀಡಿದರು. ಹರಕೆ ಹೊತ್ತ ಭಕ್ತರು ಶಸ್ತ್ರ ಹಾಕಿಸಿಕೊಂಡು ಭಕ್ತಿಯ ಪರಾಕಾಷ್ಠೆ ಮೆರೆದರು.ವೀರಭದ್ರೇಶ್ವರ ದೇವಾಲಯ ಬಳಿ ಅಣಿಗೊಳಿಸಿದ್ದ ಅಗ್ನಿಕುಂಡಕ್ಕೆ ಸಾಂಪ್ರದಾಯಿಕ ಪೂಜೆ ನೆರವೇರಿಸುತ್ತಿದ್ದಂತೆ ಸ್ವಾಮಿಯ ಪಲ್ಲಕ್ಕಿ ಹೊತ್ತ ಭಕ್ತರು ಅಗ್ನಿ ಕುಂಡದಲ್ಲಿ ನಡೆದರು. ನಂತರ ಹರಕೆ ಹೊತ್ತ ಭಕ್ತರು ನಿಗಿನಿಗಿ ಕೆಂಡ ತುಳಿದು ಭಕ್ತಿಯನ್ನು ಸಮರ್ಿಸಿದರು. ಅಗ್ನಿ ಹಾಯುವ ಕಾರ್ಯಕ್ರಮ ನೋಡಲು ಜನರು ಆಗಮಿಸಿದ್ದರು. ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಇದ್ದರು.