ಮೌನ ತಪೋನುಷ್ಟಾನ ಮಂಗಲಕ್ಕೆ ಭಕ್ತರಿಗೆ ಆಹ್ವಾನ
Devotees invited to the silent austerity festival
ರಾಣೆಬೆನ್ನೂರು 28: ಇಲ್ಲಿಗೆ ಸಮೀಪದ ಗುಡ್ಡದ ಆನ್ವೇರಿ ಗ್ರಾಮದ ಜಂಗಮ ಕ್ಷೇತ್ರ ಶಿವಯೋಗಿಶ್ವರ ಸ್ವಾಮಿ ಮಠದಲ್ಲಿ, ವಾರ್ಷಿಕ ಸಂಪ್ರದಾಯದಂತೆ ಕಳೆದ ಮೇ 21, 2026 ರಂದು ಪ್ರಾರಂಭಗೊಂಡಿರುವ ಮೌನ, ಶಿವಯೋಗ ತಪೋನುಷ್ಟಾನವು, ಇದೇ ಮೇ 31, 2026 ರಂದು ರವಿವಾರ ಮುಂಜಾನೆ ಹನ್ನೊಂದು ಗಂಟೆಗೆ ಮಂಗಲಗೊಳ್ಳಲಿದೆ ಎಂದು ಶಿವಯೋಗೀಶ್ವರ ಸ್ವಾಮಿಗಳವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗುತ್ತಲ ಕಲ್ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಜಿ ರಾಣೆಬೆನ್ನೂರು ದೊಡ್ಡಪೇಟೆ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ ವಹಿಸುವರು ರವಿವಾರ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುಗಳ ಪಾದ ಪೂಜೆ, ಆಶೀರ್ವಚನ ಮಹಾಮಂಗಲ, ನಂತರ ಸಾರ್ವಜನಿಕವಾಗಿ ಮಹಾಪ್ರಸಾದ ವಿತರಣೆಯಾಗಲಿದೆ ಎಂದು ಶ್ರೀಗಳು ತಿಳಿಸಿದ್ದು ಭಕ್ತಾದಿಗಳು ಪಾಲ್ಗೊಂಡು ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಅವರು ಕೋರಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 