ಪೌರ ಕಾರ್ಮಿಕರಿಂದ ಧರಣಿ ಸತ್ಯಾಗ್ರಹ
ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಲೋಡರ್ಸ್ ಮತ್ತು ಪೌರ ಕಾಮರ್ಿಕರ ನೇರ ನೇಮಕಾತಿಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿರುವ ಪೌರ ಕಾಮರ್ಿಕರಿಗಾಗುತ್ತಿರುವ ಅನ್ಯಾಯ ನೀತಿಯನ್ನು ಖಂಡಿಸಿ ಪೌರ ಕಾಮರ್ಿಕರು ಪುರಸಭೆ ಎದುರು ಟೆಂಟ್ ಹಾಕಿ ಅನಿಧರ್ಿಷ್ಟ ಅವಧಿಯವರೆಗೆ ಸತ್ಯಾಗ್ರಹ ಪ್ರಾರಂಭಿಸಿದರು.
ಡಾ.ಬಿ.ಆರ್.ಅಂಬೇಡ್ಕರ ಮತ್ತು ಮಹಾತ್ಮ ಗಾಂದಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ತಮಟೆ ಬಾರಿಸುವ ಮೂಲಕ ಸತ್ಯಾಗ್ರಹ ಆರಂಭಿಸಿದರು.
ನೇರ ನೇಮಕಾತಿಯಿಂದಾಗಿ ನಿಜವಾದ ಪೌರಕಾಮರ್ಿಕರಿಗೆ ಅನ್ಯಾಯವಾಗುತ್ತಿದೆ. ಇಗಿನ ಪುರಸಭೆ ಮುಖ್ಯಾಧಿಕಾರಿಗಳು ಸರಕಾರದ ಆದೇಶದ ಪ್ರಕಾರ ನೇಮಕಾತಿ ಯಾದಿಯನ್ನು ಸಕರ್ಾರಕ್ಕೆ ಕಳುಹಿಸಿ ಕೋಡದೇ ಇರುವದರಿಂದ ನಮಗೆ ನೇಮಕಾತಿಯಲ್ಲಿ ಅನ್ಯಾಯವಾಗಿದೆ.
ಹಿಂದಿನ ಮುಖ್ಯಾಧಿಕಾರಿಗಳು ಪೌರಕಾಮರ್ಿಕರ ನೇಮಕಾತಿಗೆ ಶಿಫಾರಸ್ಸು ಮಾಡಿರುವ ಪಟ್ಟಿಗೂ ನೀವು ಮಾಡಿರುವ ಪಟ್ಟಿಗೂ ವ್ಯತ್ಯಾಸವಿರುವದೇಕೇ ಎಂದು ಈಗಿನ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡೆಸಿದರು.
ಕೂಡಲೇ ಸರಕಾದ ಆದೇಶದ ಪ್ರಕಾರ ಹಿಂದಿನ ಮುಖ್ಯಾಧಿಕಾರಿ ಕುಮಾರ ರವರು ಶಿಫಾರಸ್ಸು ಮಾಡಿರುವ ಪಟ್ಟಿಯನ್ನು ಪುರಸ್ಕರಿಸಿ ನಮಗೆ ನ್ಯಾಯ ದೊರಕಿಸಿ ಕೊಡಬೇಕು. ಇಲ್ಲದೇ ಹೋದರೆ ನಮಗೆ ನ್ಯಾಯ ಸಿಗುವವರೆಗೆ ಸತ್ಯಾಗ್ರಹವನ್ನು ಅನಿಧರ್ಿಷ್ಟಕಾಲದವರೆಗೆ ಮುಂದುವರೆಸುವದಾಗಿ ಎಚ್ಚರಿಸಿದರು.
ಬಸವರಾಜ ಸಣ್ಣಪ್ಪನವರ, ರವಿ ಮಾದರ, ನಾಗಪ್ಪ ಮಾದರ, ಉಡಚಪ್ಪ ಮಾದರ, ದುಂಡಪ್ಪ ಮೇವುಂಡಿ, ಸಂತೋಷ ಮಾದರ, ಗುಡ್ಡಪ್ಪ ಬಡಿಗೇರ ಸೇರಿದಂತೆ ಮತ್ತಿತರರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 