ಧರ್ಮಸ್ಥಳ ಪ್ರಕರಣ: ಯಾರೋ ಹೇಳಿದರು ಅಂತ SIT ರಚನೆ ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Dharmasthala case: SIT cannot be formed just because someone said so: Chief Minister Siddaramaiah
ಮೈಸೂರು 18: ‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ. ಈ ಪ್ರಕರಣದಲ್ಲಿ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆರೋಪಗಳ ಕುರಿತ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರು ನೀಡಿರುವ ಹೇಳಿಕೆಗೆ ನಾವು ಪರವೂ ಇಲ್ಲ, ವಿರೋಧವೂ ಇಲ್ಲ. ಪೊಲೀಸ್ ಇಲಾಖೆಯವರು ಸಲ್ಲಿಸುವ ವರದಿಯ ಆಧಾರದ ಮೇಲೆ, ಎಸ್ಐಟಿ ಮಾಡಬೇಕೆಂಬ ಶಿಫಾರಸು ಬಂದರೆ ರಚಿಸುತ್ತೇವೆ. ಶನಿವಾರದೊಳಗೆ ಎಲ್ಲವೂ ಗೊತ್ತಾಗಲಿದೆ’ ಎಂದರು.
‘ದೂರುದಾರ 10 ವರ್ಷ ತಲೆಮರೆಸಿಕೊಂಡಿದ್ದ. ಆತ, ಪೊಲೀಸರ ಎದುರು ಹೇಳಿಕೆ ಕೊಟ್ಟಿದ್ದಾನೆ. ನಾನೇ ಹೂತು ಹಾಕಿದ್ದೇನೆ ಎಂದೆಲ್ಲಾ ಹೇಳಿದ್ದಾನೆ. ಆ ಜಾಗಕ್ಕೆ ಕರೆದುಕೊಂಡು ಹೋದರೆ ಹೆಣಗಳನ್ನು ತೋರಿಸುತ್ತೇನೆ ಎಂದೂ ಹೇಳಿದ್ದಾನೆ. ಪೊಲೀಸರು ಏನು ಹೇಳುತ್ತಾರೆಯೋ ನೋಡೋಣ’ ಎಂದು ಹೇಳಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 