ಧಾರವಾಡ: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿಗೆ ಜನತಾ ಶಿಕ್ಷಣ ಸಮಿತಿಯಿಂದ ಸನ್ಮಾನ

ಧಾರವಾಡ: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿಗೆ ಜನತಾ ಶಿಕ್ಷಣ ಸಮಿತಿಯಿಂದ ಸನ್ಮಾನ  Dharwad: Union Education Minister Pralhad Joshi felicitated by Janata Shikshana Samiti


ಧಾರವಾಡ, ಆ.25: ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಧಾರವಾಡಕ್ಕೆ ಆಗಮಿಸಿದ ಕೇಂದ್ರ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಪ್ರಹ್ಲಾದ ಜೋಶಿ ಅವರನ್ನು ಧಾರವಾಡದ ಜನತಾ ಶಿಕ್ಷಣ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪರವಾಗಿ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಅವರು ಶ್ರೀ ಪ್ರಹ್ಲಾದ ಜೋಶಿ ಅವರನ್ನು ಸನ್ಮಾನಿಸಿದರು.  ಕಾರ್ಯಕ್ರಮದಲ್ಲಿ ಶ್ರೀ ಅರಿಹಂತ ಪ್ರಸಾದ್, ಶ್ರೀ ಮಹಾವೀರ ಉಪಾಧ್ಯೆ, ಜೆ.ಎಸ್‌.ಎಸ್‌. ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.