ಧಾರವಾಡ ಆಕಾಶವಾಣಿ ಮುಖ್ಯಸ್ಥ ಶರಣಬಸವ ಚೋಳಿನ ಸೇವಾ ನಿವೃತ್ತಿ
Dharwad All India Radio Chief Sharanabasava Chola retires from service
ಲೋಕದರ್ಶನ ವರದಿ
ಧಾರವಾಡ, ಮಾ. 28: ಆಕಾಶವಾಣಿ ಧಾರವಾಡ ಕೇಂದ್ರದ, ಸಹಾಯಕ ನಿರ್ದೇಶಕ ಹಾಗೂ ಕಾರ್ಯಕ್ರಮ ವಿಭಾಗದ ಮುಖ್ಯಸ್ಥ, ಭಾರತೀಯ ಪ್ರಸಾರ ಸೇವೆ (ಐ.ಬಿ.ಪಿ.ಎಸ್.) ಹಿರಿಯ ಅಧಿಕಾರಿ, ಶರಣಬಸವ ಚೋಳಿನ ಅವರು, 35 ವರ್ಷಗಳ ಸುಧೀರ್ಘ ಸೇವೆಯ ಬಳಿಕ, ಈ ತಿಂಗಳ 31 ರಂದು, ಸೇವಾ ನಿವೃತ್ತಿ ಹೊಂದಲಿದ್ದಾರೆ.
ಕ್ರಿಯಾಶೀಲ ಕಾರ್ಯಕ್ರಮ ಅಧಿಕಾರಿಯಾಗಿ, ಸೃಜನಶೀಲ ಸಹಾಯಕ ನಿರ್ದೇಶಕರಾಗಿ, ಸೇವಾ ನಿವೃತ್ತರಾಗಲಿರುವ, ಶರಣಬಸವ ಚೋಳಿನ ಅವರಿಗೆ, ಆಕಾಶವಾಣಿ ಧಾರವಾಡ ಕೇಂದ್ರದ, ಕಾರ್ಯಕ್ರಮ ವಿಭಾಗ, ತಾಂತ್ರಿಕ ವಿಭಾಗ ಹಾಗೂ ಆಡಳಿತ ವರ್ಗದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ಬೀಳ್ಕೊಡುಗೆ ಸಮಾರಂಭ ಆಯೋಜಿಸಿದ್ದಾರೆ.
ಸೋಮವಾರ, ದಿನಾಂಕ 30 ರಂದು, ಬೆಳಗ್ಗೆ 11 ಗಂಟೆಗೆ, ಆಕಾಶವಾಣಿ ಧಾರವಾಡ ಕೇಂದ್ರದ ಆವರಣದಲ್ಲಿ, ಮನಗುಂಡಿಯ ಗುರು ಬಸವ ಮಹಾಮನೆಯ, ಬಸವಾನಂದ ಸ್ವಾಮೀಜಿ ಸಾನಿಧ್ಯದಲ್ಲಿ, ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ, ಉಪ ಕುಲಪತಿ, ಪ್ರೊಫೆಸರ್ ಪಿ.ಎಲ್.ಪಾಟೀಲ ಶುಭಾಶಂಸನೆ ನೆರವೇರಿಸಲಿದ್ದಾರೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಉಪ ಕುಲಪತಿ, ಎ.ಎಂ. ಖಾನ್ ಹಾಗೂ ತಾಂತ್ರಿಕ ವಿಭಾಗದ ಉಪ ಮಹಾನಿರ್ದೇಶಕ ಅರುಣ ಪ್ರಭಾಕರ, ಅತಿಥಿಯಾಗಿ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತ ಗಣ್ಯರು, ಆಕಾಶವಾಣಿಯ ಕೇಳುಗರು ಭಾಗವಹಿಸಲಿದ್ದು, ಮಾಧ್ಯಮ ಮಿತ್ರರಿಗೂ, ಆತ್ಮೀಯ ಆಮಂತ್ರಣವಿದೆ.
ಏಪ್ರಿಲ್ 1, ಬುಧವಾರ, ಆಕಾಶವಾಣಿ ಧಾರವಾಡ ಕೇಂದ್ರದ, ಕಾರ್ಯಕ್ರಮ ವಿಭಾಗದ ಮುಖ್ಯಸ್ಥರಾಗಿ, ಹಿರಿಯ ಕಾರ್ಯಕ್ರಮ ನಿರ್ವಾಹಕಿ, ಮಂಜುಳಾ ಪುರಾಣಿಕ ಅವರು, ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 