ಧಾರವಾಡ ಐಡಲ್: 2025 ಗ್ರ್ಯಾಂಡ್ ಪಿನಾಲೆ ಕಾರ್ಯಕ್ರಮ
Dharwad Idol: 2025 Grand Finale Program
ಧಾರವಾಡ 31: ನಗರದ ಮಕ್ಕಳ ಅಕಾಡೆಮಿಯ ರಜತ ಮಹೋತ್ಸವದ ನಿಮಿತ್ತ ಗುಜ್ಜಾಡಿ ಸ್ವರ್ಣ ಜುವೆಲ್ಲರ್ಸ, ಧಾರವಾಡ ಹಾಗೂ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಸಹಯೋಗದಲ್ಲಿ ಧಾರವಾಡ ಐಡಲ್ಹಿ2025 ಗ್ರ್ಯಾಂಡ್ ಪಿನಾಲೆ ಕಾರ್ಯಕ್ರಮವನ್ನು ದಿ. 02.11.2025ರಂದು ಸಂಜೆ 5 ಗಂಟೆಗೆ ನಗರದ ಸೃಜನಾ ರಂಗಮಂದಿರದಲ್ಲಿ ಏರಿ್ಡಸಲಾಗಿದೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಖ್ಯಾತ ಹಿಂದೂಸ್ಥಾನಿ ಗಾಯಕಿ ವಿದುಷಿ ಸಂಗೀತಾ ಕಟ್ಟಿ, ವಿದುಷಿ ಸುಜಾತಾ ಗುರವ, ಡಾ. ಶ್ರೀಧರ ಕುಲಕರ್ಣಿ ಮತ್ತು ಖ್ಯಾತ ಸಿತಾರವಾದಕ ಉಸ್ತಾದ್ ಶಫಿಕಖಾನ್ ನಿರ್ಣಾಯಕರಾಗಿ ಪಾಲ್ಗೊಳ್ಳುವರು. ಮಕ್ಕಳ ಅಕಾಡೆಮಿ ಅಧ್ಯಕ್ಷ ಡಾ. ರಾಜನ್ ದೇಶಪಾಂಡೆ ಅಧ್ಯಕ್ಷತೆ ವಹಿಸುವರು. ಗುಜ್ಜಾಡಿ ಸ್ವರ್ಣ ಜುವೆಲ್ಲರ್ಸ ವ್ಯವಸ್ಥಾಪಕ ನಿರ್ದೇಶಕ ಗುರುದತ್ತ ನಾಯಕ, ಕುಮಾರೇಶ್ವರ ಕಲ್ಚರಲ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕಮಠ, ಮಕ್ಕಳ ಅಕಾಡೆಮಿ ಕಾರ್ಯದರ್ಶಿ ಡಾ. ಎಂ.ವಾಯ್.ಸಾವಂತ, ಸಂಯೋಜಕ ಡಾ.ವಿಜಯ ತ್ರಾಸದ ಉಪಸ್ಥಿತರಿರುವರು.
ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ 18 ಯುವ ಪ್ರತಿಭಾನ್ವಿತ ಕಲಾವಿದರು ಧಾರವಾಡ ಐಡಲ್ ಗ್ರ್ಯಾಂಡ್ ಪಿನಾಲೆಯಲ್ಲಿ ಪಾಲ್ಗೊಳ್ಳುವರು. ವಿಜೇತರಿಗೆ ಧಾರವಾಡ ಐಡಲ್ ಗುಜ್ಜಾಡಿ ಸ್ವರ್ಣ ಟ್ರೋಫಿ ಪ್ರದಾನ ಮಾಡಲಾಗುವುದು. ಕಲಾಸಕ್ತರು, ಸಂಗೀತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕುಮಾರೇಶ್ವರ ಕಲ್ಚರಲ್ ಸೊಸೈಟಿ ಸಂಯೋಜಕ ಪ್ರಕಾಶ ಬಾಳಿಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 