ಧೋನಿ ನಿವೃತ್ತಿಯ ಬಗ್ಗೆ ಆಯ್ಕೆದಾರರೊಂದಿಗೆ ಚರ್ಚಿಸುವೆ: ಗಂಗೂಲಿ
ಕೋಲ್ಕತ್ತಾ, ಅ. 16: ಮಾಜಿ ನಾಯಕ ಹಾಗೂ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿಯ ಬಗ್ಗೆ ಆಯ್ಕೆದಾರರೊಂದಿಗೆ ಚರ್ಚಿಸುವುದಾಗಿ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ)ಯ ನೂತನ ಅಧ್ಯಕ್ಷಗಾದಿಗೆ ಹತ್ತಿರ ಇರುವ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ತಿಳಿಸಿದ್ದಾರೆ. "24 ರಂದು ಆಯ್ಕೆ ಸಮಿತಿಯ ಸದಸ್ಯರೊಂದಿಗೆ ಮಾತುಕತೆ ನಡೆಸಲಿದ್ದೇನೆ. ಈ ವೇಳೆ ಈ ವಿಷಯದ ಬಗ್ಗೆ ಚರ್ಚೆ ಮಾಡುವೆ. ಆಯ್ಕೆದಾರರು ಈ ವಿಚಾರದ ಬಗ್ಗೆ ಯಾವ ನಿಲುವನ್ನು ಹೊಂದಿದ್ದಾರೆ ಎಂಬುದನ್ನು ಅರಿತು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ. ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸ್ಥಾನಕ್ಕೆ ದಾದಾ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಬಿಸಿಸಿಐ ಚುನಾವಣೆ 23ರಂದು ನಡೆಯಲಿದೆ. "ಧೋನಿ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಿದ್ದೇನೆ. ಅವರ ನಿರ್ಧಾರವನ್ನು ಕೇಳುತ್ತೇನೆ" ಎಂದಿದ್ದಾರೆ. ಧೋನಿ ಅವರು ಇಂಗ್ಲೆಂಡ್ ನಲ್ಲಿ ನಡೆದ ವಿಶ್ವಕಪ್ ಬಳಿಕ ನಿವೃತ್ತಿ ಘೋಷಿಸುತ್ತಾರೆ ಎಂಬ ಸುದ್ದಿ ಇತ್ತು. ಅಲ್ಲದೆ ಮಾಹಿ ವಿಂಡೀಸ್ ಪ್ರವಾಸದಿಂದಲೂ ದೂರ ಸರೆದಿದ್ದರು. ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಮೂರು ಟಿ-20 ಪಂದ್ಯಗಳ ಸರಣಿಗೆ ಧೋನಿ ಅವರ ಆಯ್ಕೆ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 