ಈ ದಿನ ಬರುವುದೆಂದು ನಿರೀಕ್ಷಿಸಿರಲಿಲ್ಲ: ಪೇಜಾವರ ಶ್ರೀ
ಉಡುಪಿ, ನ : ನನ್ನ ಜೀವನದಲ್ಲಿ ಈ ದಿನ ಬರಲಿದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಮಾತನಾಡಿದ ಶ್ರೀಗಳು, ನನ್ನ ಜೀವನದಲ್ಲಿ ಈ ದಿನ ಬರಲಿದೆ ಎಂದು ನಿರೀಕ್ಷಿಸಿರಲಿಲ್ಲ. ಬಹಳ ವಯಸ್ಸಾಗಿರುವುದರಿಂದ ರಾಮಮಂದಿರದ ಆಸೆ ಕಳೆದುಕೊಂಡಿದ್ದೆ. ಬಹಳ ನಿರೀಕ್ಷೆಯಿಂದ ಈ ತೀರ್ಪನ್ನು ಎದುರು ನೋಡುತ್ತಿದ್ದೇನೆ. ರಾಮಮಂದಿರ ಇಡೀ ದೇಶದ ಜನರ ಕನಸು, ರಾಮ ಮಂದಿರದ ಸ್ವಲ್ಪ ದೂರದಲ್ಲಿ ಮಸೀದಿ ಕೂಡ ನಿಮರ್ಾಣವಾಗಲಿ ಎಂದು ಆಶಿಸುತ್ತೇನೆ. ಇಂದಿನ ತೀಪು ಯಾರ ಪರ, ವಿರುದ್ಧವಾದರೂ ಸೌಹಾರ್ದತೆ ಮುಖ್ಯ. ಇಲ್ಲಿ ಸಂವಿಧಾನಕ್ಕೆ ಭಂಗವಾಗಬಾರದು ಎಂದರು. ಕಾನೂನು ಹಾಗೂ ನ್ಯಾಯಾಲದ ವಿರುದ್ಧ ವರ್ತನೆ ಬೇಡ ಎಂದು ಶ್ರೀಗಳು ವಿನಂತಿಸಿದರು. ರಾಜ್ಯದಲ್ಲಿ ಸಂಘರ್ಷ ಉದ್ಭವವಾದರೇ, ಉಪವಾಸ ಕೂರುವುದಾಗಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಭಾನುವಾರ ದೆಹಲಿಯಲ್ಲಿ ನಡೆಯಲಿರುವ ಸಂತರ ಶಾಂತಿಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಮಾಹಿತಿ ನೀಡಿದ ಅವರು, ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವ ಆಲೋಚನೆ ಹೊಂದಿದ್ದೇನೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 