ದವನದ ಹುಣ್ಣಿಮೆಯಂದು ದಿಗಂಬರೇಶ್ವರ ರಥೋತ್ಸವ
Digambareshwara Chariot Festival on the full moon day of Davan
ಕೊಲ್ಹಾರ 03 : ಪ್ರತಿ ವರ್ಷ ದವನದ ಹುಣ್ಣಿಮೆಯಿಂದ ಐದು ದಿನಗಳವರೆಗೆ ನಡೆಯುವ ದಿಗಂಬರೇಶ್ವರ ಸಂಸ್ಥಾನ ಮಠದ ಜಾತ್ರೆ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳಿಂದ ಬಂದಿರುವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಹರ್ಷೋದ್ಘಾರಗಳ ಮಧ್ಯೆ ಗುರುವಾರ ವಿಜೃಂಭಣೆಯಿಂದ ರಥೋತ್ಸವ ತಡರಾತ್ರಿ ಜರುಗಿತು. ಮಠಕ್ಕೆ ಬೆಳಿಗ್ಗೆ ಯಿಂದಲೆ ಭಕ್ತರು ತಮ್ಮ ಇಷ್ಟಾರ್ಥ ಹರಕೆಯನ್ನು ತೀರಿಸಲು ಧೀರ್ಘ ದಂಡ ಪ್ರಣಾಮ ಸೇವೆಯನ್ನು ಸಲ್ಲಿಸಿದರು. ನಂತರ ಮಠದ ರಥದ ಕಳಸಾರೋಹಣ ನಡೆದ ಬಳಿಕ ಸಾಯಂಕಾಲ ಬೀಳಗಿ ತಾಲೂಕಿನ ಡವಳೇಶ್ವರ ಗ್ರಾಮದ ಭಕ್ತರು ತಂದ ತೇರಿನ ಹಗ್ಗದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಠಕ್ಕೆ ಆಗಮಿಸಿದ ಬಳಿಕ ಮಠದ ಪರಮ ಪೂಜ್ಯ ಶ್ರೀ ಕಲ್ಲಿನಾಥ ಸ್ವಾಮೀಜಿ ಮೂರ್ತಿಯೊಂದಿಗೆ ರಥದಲ್ಲಿ ಕುಳಿತುಕೊಂಡ ಬಳಿಕ ಭಕ್ತರ ಸಮ್ಮುಖದಲ್ಲಿ ತೇರನ್ನು ಎಳೆಯಲಾಯಿತು ಭಕ್ತರು ರಥೋತ್ಸವಕ್ಕೆ ಉತ್ತತ್ತಿ ಹಾಗೂ ಬಾಳೆ ಹಣ್ಣುಗಳನ್ನು ಹಾರಿಸುವ ಮೂಲಕ ತಮ್ಮ ಭಕ್ತಿ ಸೇವೆಯನ್ನು ಸಲ್ಲಿಸಿದರು ರಥೋತ್ಸವ ವೇಳೆಯಲ್ಲಿ ಕೊಲ್ಹಾರ ಠಾಣೆಯ ಪಿಎಸ್ಐ ಅಶೋಕ ನಾಯಕ ಸೂಕ್ತ ಪೋಲಿಸ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು. ಮಠಾಧೀಶರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕಲ್ಲು ದೇಸಾಯಿ, ಬಿಜೆಪಿ ಯುವ ಮುಖಂಡ ವೀನೀತಕುಮಾರ ದೇಸಾಯಿ, ರಫೀಕ್ ಪಕಾಲಿ, ಹಣಮಂತ ಬೆಳ್ಳುಬ್ಬಿ, ಶ್ರೀಶೈಲ ಪತಂಗಿ , ಟಿ.ಟಿ.ಹಗೇದಾಳ, ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ದುರೀಣರು, ಗಣ್ಯರು ರಥೋತ್ಸವದಲ್ಲಿ ಭಾಗವಹಿಸಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 