ಹುಲ್ಯಾಳ ಕೆರೆಗೆ ಗಣ್ಯರಿಂದ ಬಾಗಿನ ಅರ್ಪಣೆ
Dignitaries offers Bagina to Hulyala Lake
ರಾಯಬಾಗ, 07 : ಹಿರಣ್ಯಕೇಶಿ ನದಿಯಿಂದ ಕೆನಾಲ ಮೂಲಕ ಈ ಭಾಗದಲ್ಲಿ ನೀರಿನ ಅಭಾವ ಉಂಟಾಗದಂತೆ ಮಳೆ ಪ್ರಾರಂಭಗೊಳ್ಳುವ ಮೊದಲೆ ಪಟ್ಟಣದ ಹುಲ್ಯಾಳ ಕೆರೆ ತುಂಬಿಸಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಶಿವನಗೌಡ ಪಾಟೀಲ ಹೇಳಿದರು.
ಶನಿವಾರ ಪಟ್ಟಣದ ಹುಲ್ಯಾಳ ಕೆರೆಗೆ ಬಾಗಿನ ಅರ್ಿಸಿ ಮಾತನಾಡಿದ ಅವರು, ಹಿರಣ್ಯಕೇಶಿ ನದಿ ಪೋಲು ಆಗಿ ಹಳ್ಳಕ್ಕೆ ಹರಿದು ಹೋಗುವ ಬದಲಾಗಿ, ಈ ಭಾಗದ ರಾಯಬಾಗ ಸೇರಿದಂತೆ ನಂದಿಕುರಳಿ, ನಸಲಾಪೂರ, ಕೆಂಪಟ್ಟಿ, ಕೆರೂರ, ಖಡಕಲಾಟ ವರೆಗಿನ ಗ್ರಾಮಗಳ ಕೇನಾಲಗಳಿಗೆ ಹರಿಸುವುದರಿಂದ ಸಾರ್ವಜನಿಕರಿಗೆ ಮತ್ತು ರೈತರಿಗೆ ಅನುಕೂಲವಾಗಲಿಗೆ ಎಂದು ತಿಳಿಸಿದರು. ಕೇನಾಲಗಳಿಗೆ ನೀರು ಹರಿವುದರಿಂದ ಅಂತರಜಲಮಟ್ಟ ಹೆಚ್ಚಿಸಿ, ಬೊರವೇಲ್ಗಳಿಗೆ ನೀರು ದೊರೆಯುತ್ತದೆ. ರೈತರು ಪಟ್ಟಣದ ಜನರಿಗೆ ಕುಡಿಯುವ ನೀರು ಕಡಿಮೆಯಾದಂತೆ ನೋಡಿಕೊಳ್ಳಬೇಕು. ನೀರು ಹರಿಸಲು ಕಾರಣಿಭೂತರಾಗಿರುವ ಸಚಿವ ಸತೀಶ ಜಾರಕಿಹೊಳಿ, ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ನೀರಾವರಿ ಇಲಾಖೆ ಅಭಿಯಂತರರಿಗೆ ರೈತರ ಮತ್ತು ಸಾರ್ವಜನಿಕರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ ಮಾತನಾಡಿ, ಪೋಲು ಆಗಿ ಹೋಗುತ್ತಿದ್ದ ನೀರನ್ನು ಕೆನಾಲ ಮತ್ತು ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಂಡಿರುವ ನೀರಾವರಿ ಇಲಾಖೆ ಅಧಿಕಾರಿಗಳ ಕಾರ್ಯ ಮೆಚ್ಚುವಂತಹದ್ದು, ಈ ನೀರಿನ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಹೇಳಿದರು.
ರಾಯಬಾಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಬಂಡಗರ, ಜ್ಯೋತಿ ಕೆಂಪಟ್ಟಿ, ತಮ್ಮಣ್ಣಿ ನಿಂಗನೂರೆ, ದೀಲೀಪ ಜಮಾದಾರ, ಅಬ್ದುಲಸತ್ತಾರ ಮುಲ್ಲಾ, ಹರೀಶ ಕುಲಗುಡೆ, ವಿವೇಕ ಹಟ್ಟಿಕರ, ಮಾರುತಿ ನಾಯಿಕ, ಅಣ್ಣಾಸಾಹೇಬ ಸಮಾಜೆ, ದೀಲೀಪ ಜಮಾದಾರ, ಅರ್ಜುನ ಬಂಡಗರ, ಹಾಜಿ ಮುಲ್ಲಾ, ಫಾರೂಕ ಮೊಮಿನ, ಜಿನ್ನಪ್ಪ ಖೆಮಲಾಪೂರೆ, ಎಸ್.ಜಿ.ಸಲಗರೆ, ಅಭಿಯಂತರ ಎಚ್.ಎಲ್.ಪೂಜಾರಿ, ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 