ಜನ್ಮದಿನಕ್ಕೆ ಶುಭಾಶಯ ಕೋರಲು ಆಗಮಿಸದಂತೆ‌ ಡಿಕೆಶಿ ಮನವಿ

 ಜನ್ಮದಿನಕ್ಕೆ ಶುಭಾಶಯ ಕೋರಲು ಆಗಮಿಸದಂತೆ‌ ಡಿಕೆಶಿ ಮನವಿ

ಬೆಂಗಳೂರು, ಮೇ10,ತಾವು  ಊರಲ್ಲಿ ಇಲ್ಲದಿರುವುದರಿಂದ ಮೇ 15ರಂದು ತಮಗೆ ಜನ್ಮದಿನದ ಶುಭಾಶಯ ಕೋರಲು ಯಾರೂ  ಬರಬಾರದೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಮನವಿ ಮಾಡಿದ್ದಾರೆ.ಅನಿವಾರ್ಯ ಕಾರಣಗಳಿಂದ ಮೇ 14 ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ.  ಹೀಗಾಗಿ ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ  ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು  ಬೇಡ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು ಎಂದು ಶಿವಕುಮಾರ್ ವಿನಂತಿ ಮಾಡಿದ್ದಾರೆ.