ನೆರೆಪೀಡಿತ ಪ್ರದೇಶಗಳ ರಕ್ಷಣಾ ಕಾರ್ಯದಲ್ಲಿ ತೊಡಗುವಂತೆ ಕಾರ್ಯಕರ್ತರಿಗೆ ಸೂಚನೆ : ದಿನೇಶ್ ಗುಂಡೂರಾವ್
ಬೆಂಗಳೂರು, ಆ 8 ರಾಜ್ಯದ ವಿವಿದೆಡೆ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಪ್ರವಾಹಪೀಡಿತ ಜಿಲ್ಲೆಗಳ ಜನರ ರಕ್ಷಣೆಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ರಾಜ್ಯದ 15 ಜಿಲ್ಲೆಗಳಲ್ಲಿ ನೆರೆ ಉಂಟಾದ ಪರಿಣಾಮ ಹಳ್ಳಿಗಳು ಮುಳುಗಿವೆ, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ರೈತರು, ಜಾನುವಾರುಗಳು ಸಂಕಷ್ಟದಲ್ಲಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸುವುದು ನಮ್ಮೆಲ್ಲರ ಜವಾಬ್ದಾರಿ. ಪಕ್ಷದ ಕಾರ್ಯಕರ್ತರು ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯಗಳಲ್ಲಿ ತೊಡಗುವಂತೆ ಅವರು ಟ್ವೀಟ್ ಮಾಡಿದ್ದಾರೆ ಈಗಾಗಲೇ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಹೆಚ್. ಕೆ. ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ನೇತೃತ್ವದಲ್ಲಿ ನೆರೆಪೀಡಿತ ಪ್ರದೇಶಗಳ ವೀಕ್ಷಣೆಗೆ ಎರಡು ತಂಡ ರಚಿಸಲಾಗಿದ್ದು, ಶುಕ್ರವಾರದಿಂದ ಈ ತಂಡಗಳು ಪ್ರವಾಸ ಆರಂಭಿಸಲಿವೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 