ದಿನೇಶ್ ಗುಂಡೂರಾವ್ ರಿಂದ ಕಾಂಗ್ರೆಸ್ ಮರಣಶೆಯ್ಯೆಯಲ್ಲಿ: ಡಾ. ಕೆ. ಸುಧಾಕರ್
ಚಿಕ್ಕಬಳ್ಳಾಪುರ, ಅ 19: ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ ಗುಂಡೂರಾವ್ ಪದಗ್ರಹಣ ಮಾಡಿದ ನಂತರ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಮರಣಶಯ್ಯೆಯಲ್ಲಿದೆ ಎಂದು ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಡಾ.ಕೆ. ಸುಧಾಕರ್ ಟೀಕಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ನೊಗ ಹೊತ್ತ ಬಳಿಕವೇ ರಾಜ್ಯದಲ್ಲಿ ಕಾಂಗ್ರೆಸ್ ಸತ್ತು ಹೋಯಿತು ಎಂದರು.
ಐದು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ದುಸ್ತಿಗೆ ಬಂದಿದೆ. ಕಳೆದ ವಿಧಾನಸಭೆಯಲ್ಲಿ 127 ಇದ್ದ ಶಾಸಕರ ಸಂಖ್ಯೆ ಈಗ 78 ಕ್ಕೆ ಕುಸಿದಿದೆ. ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆ ಲೋಕಸಭಾ ಚುನಾವಣೆಯಲ್ಲಿ 1 ಸ್ಥಾನಕ್ಕೆ ಕುಸಿದಿದೆ ಎಂದರು.
ದಿನೇಶ್ ಗುಂಡೂರಾವ್ ಮೊದಲು ತಮ್ಮ ಯೋಗ್ಯತೆಯನ್ನು ಅರಿಯಲಿ. ಅಧ್ಯಕ್ಷರಾಗಿ ಹೇಗೆ ಇರಬೇಕು. ಹೇಗೆ ಕಾರ್ಯ ನಿರ್ವಹಿಸಬೇಕು, ಯಾವ ರೀತಿ ಮಾತನಾಡಬೇಕು ಎಂಬುದನ್ನು ತಿಳದುಕೊಳ್ಳಲಿ. ಅವರಿಂದಲೇ ರಾಜ್ಯದಲ್ಲಿ ಪಕ್ಷ ಆಧೋಗತಿಗೆ ಇಳಿಯಿತು. ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದು ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಬಿಜೆಪಿ ಸಕರ್ಾರ ಸತ್ತು ಹೋಗಿದೆ. ರಾಜ್ಯ ಸಕರ್ಾರ ಕೇಂದ್ರದಿಂದ ನೆರೆ ಪರಿಹಾರ ತರುವಲ್ಲಿ ವಿಫಲವಾಗಿದೆಯೆಂಬ ದಿನೇಶ್ ಗುಂಡೂರಾವ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆಯೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಗತಿ ಬಂದಿದೆ ಎಂದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸಕರ್ಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಯಾವುದೇ ಸಕರ್ಾರವನ್ನು ಎರಡು ತಿಂಗಳಲ್ಲಿ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ. ಹಾಲಿ ಸಕರ್ಾರಕ್ಕೆ ಸ್ವಲ್ಪ ಕಾಲಾವಕಾಶ ನೀಡುವ ಅಗತ್ಯವಿದೆ ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 