ನೂತನ ಎಸ್ಪಿಯಾಗಿ ದಿಪನ್ ನೇಮಕ ಎಸ್ಪಿ ನಾರಾಯಣ ವರ್ಗಾವಣೆ
Dipan appointed as new SP, SP Narayan transferred
ಕಾರವಾರ 15: ಉತ್ತರ ಕನ್ನಡ ಜಿಲ್ಲಾ ಎಸ್ಪಿ ನಾರಾಯಣ ಅವರನ್ನು ಎಲೆಕ್ಟ್ರಾನಿಕ್ ಸಿಟಿ ಡಿ ಎಸ್ ಪಿ ಯಾಗಿ ಸರ್ಕಾರ ವರ್ಗಾವಣೆ ಮಾಡಿದೆ. ಎಸ್ಪಿ ನಾರಾಯಣ ಅವರು ಒಂದು ವರ್ಷ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ರೌಡಿಗಳ ಪಾಲಿಗೆ ಕೆಟ್ಟ ಸ್ವಪ್ನವಾಗಿದ್ದರು. ಪೊಲೀಸರನ್ನು ವಿದ್ಯಾರ್ಥಿ ಸ್ನೇಹಿಯಾಗಿ ಮಾಡುವಲ್ಲಿ ಹೊಸ ಪ್ರಯೋಗ ಮಾಡಿದ್ದರು. ಮಾಧ್ಯಮಗಳಿಂದ ದೂರ ಇದ್ದ ಅವರು ಫೇಸ್ ಬುಕ್ ಮೂಲಕ ಪೊಲೀಸ್ ಇಲಾಖೆಯ ಕೆಲಸಗಳನ್ನು ಪ್ರಚಾರ ಮಾಡುತ್ತಿದ್ದರು. ಅಪರಾಧ ಪ್ರಕರಣಗಳಲ್ಲಿ , ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದವರ ಕಾಲಿಗೆ ಗುಂಡು ಹಾರಿಸುವ ಮೂಲಕ ಅಪರಾಧಿಗಳಲ್ಲಿ ಭಯ ಹುಟ್ಟಿಸಿದ್ದರು. ನೂತನ ಎಸ್ಪಿಯಾಗಿ ದಿಪನ್ ನೇಮಕ : ಉತ್ತರ ಕನ್ನಡ ಜಿಲ್ಲೆಗೆ ದೀಪನ್ ಎಂ.ಎನ್ .ಅವರನ್ನು ನೂತನ ಎಸ್ಪಿಯಾಗಿ ಸರ್ಕಾರ ನೇಮಕ ಮಾಡಿದೆ. ದೀಪನ್ 2019ರ ಐಪಿಎಸ್ ಅಧಿಕಾರಿ. ಕೆಎಸ್ ಆರ್ ಪಿ ಬಟಾಲಿಯನ್ ನಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈಗ ಉತ್ತರ ಕನ್ನಡ ಜಿಲ್ಲೆಯ ಹೊಸ ಎಸ್ಪಿಯಾಗಿ ಆಗಮಿಸಲಿದ್ದಾರೆ.....
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 