ನೂತನ ಎಸ್ಪಿಯಾಗಿ ದಿಪನ್ ನೇಮಕ ಎಸ್ಪಿ ನಾರಾಯಣ ವರ್ಗಾವಣೆ
Dipan appointed as new SP, SP Narayan transferred
ಕಾರವಾರ 15: ಉತ್ತರ ಕನ್ನಡ ಜಿಲ್ಲಾ ಎಸ್ಪಿ ನಾರಾಯಣ ಅವರನ್ನು ಎಲೆಕ್ಟ್ರಾನಿಕ್ ಸಿಟಿ ಡಿ ಎಸ್ ಪಿ ಯಾಗಿ ಸರ್ಕಾರ ವರ್ಗಾವಣೆ ಮಾಡಿದೆ. ಎಸ್ಪಿ ನಾರಾಯಣ ಅವರು ಒಂದು ವರ್ಷ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ರೌಡಿಗಳ ಪಾಲಿಗೆ ಕೆಟ್ಟ ಸ್ವಪ್ನವಾಗಿದ್ದರು. ಪೊಲೀಸರನ್ನು ವಿದ್ಯಾರ್ಥಿ ಸ್ನೇಹಿಯಾಗಿ ಮಾಡುವಲ್ಲಿ ಹೊಸ ಪ್ರಯೋಗ ಮಾಡಿದ್ದರು. ಮಾಧ್ಯಮಗಳಿಂದ ದೂರ ಇದ್ದ ಅವರು ಫೇಸ್ ಬುಕ್ ಮೂಲಕ ಪೊಲೀಸ್ ಇಲಾಖೆಯ ಕೆಲಸಗಳನ್ನು ಪ್ರಚಾರ ಮಾಡುತ್ತಿದ್ದರು. ಅಪರಾಧ ಪ್ರಕರಣಗಳಲ್ಲಿ , ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದವರ ಕಾಲಿಗೆ ಗುಂಡು ಹಾರಿಸುವ ಮೂಲಕ ಅಪರಾಧಿಗಳಲ್ಲಿ ಭಯ ಹುಟ್ಟಿಸಿದ್ದರು. ನೂತನ ಎಸ್ಪಿಯಾಗಿ ದಿಪನ್ ನೇಮಕ : ಉತ್ತರ ಕನ್ನಡ ಜಿಲ್ಲೆಗೆ ದೀಪನ್ ಎಂ.ಎನ್ .ಅವರನ್ನು ನೂತನ ಎಸ್ಪಿಯಾಗಿ ಸರ್ಕಾರ ನೇಮಕ ಮಾಡಿದೆ. ದೀಪನ್ 2019ರ ಐಪಿಎಸ್ ಅಧಿಕಾರಿ. ಕೆಎಸ್ ಆರ್ ಪಿ ಬಟಾಲಿಯನ್ ನಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈಗ ಉತ್ತರ ಕನ್ನಡ ಜಿಲ್ಲೆಯ ಹೊಸ ಎಸ್ಪಿಯಾಗಿ ಆಗಮಿಸಲಿದ್ದಾರೆ.....
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 