ಗದಗದಿಂದ ಧರ್ಮಸ್ಥಳ ಹಾಗೂ ಮಂಗಳೂರು ನಗರಕ್ಕೆ ನೇರ ಬಸ್ ಸಂಚಾರ ವ್ಯವಸ್ಥೆ
Direct bus service from Gadag to Dharmasthala and Mangalore city
ಗದಗ 21 : ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶುಕ್ರವಾರ (ಫೆ. 20) ರಂದು ಗದಗದಿಂದ ಧರ್ಮಸ್ಥಳ ಹಾಗೂ ಮಂಗಳೂರು ನಗರಕ್ಕೆ ನೇರ ಬಸ್ ಸಂಚಾರಕ್ಕೆ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ಗದಗ ಮಾರ್ಗವಾಗಿ ಹೊರಡುವ ಬಸ್ ಲಕ್ಷೆ-್ಮಶ್ವರ, ಹಾವೇರಿ, ರಾಣೇಬೆನ್ನೂರು, ಹರಿಹರ, ಶಿವಮೊಗ್ಗ, ಕಡೂರು, ಉಡುಪಿ, ಚಿಕ್ಕಮಗಳೂರು, ಉಜಿರೆ, ಧರ್ಮಸ್ಥಳಕ್ಕೆ ತಲುಪುವ 2 ಬಸ್ ಗಳು ಪ್ರತಿದಿನ ಸಂಜೆ 7 ಗಂಟೆಗೆ ಗದಗ ಬಸ್ ನಿಲ್ದಾಣದಿಂದ ಹೊರಡುತ್ತದೆ ಬಸ್ ನ ಪ್ರಯಾಣದ ದರ 455 ರೂಪಾಯಿ ಇರುತ್ತದೆ.
ಗದಗ ಮಾರ್ಗವಾಗಿ ಹೊರಡುವ ಬಸ್ ಹುಬ್ಬಳ್ಳಿ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಕುಂದಾಪುರ, ಉಡುಪಿ, ಮಂಗಳೂರುಗೆ ತಲುಪುವ 2 ಬಸ್ ಗಳು ಪ್ರತಿದಿನ ಬೆಳಗ್ಗೆ 8 ಗಂಟೆಗೆ ಗದಗ ಬಸ್ ನಿಲ್ದಾಣದಿಂದ ಹೊರಡುತ್ತದೆ ಬಸ್ ನ ಪ್ರಯಾಣದ ದರ 472 ರೂಪಾಯಿ ಇರುತ್ತದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ ಅಸೂಟಿ, ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಜಿ, ಗ್ಯಾರಂಟಿ ಸಮಿತಿ ಸದಸ್ಯರಾದ ಕೆ.ಎಚ್. ಪಾಟೀಲ್, ಮೀನಾಕ್ಷಿ ಬೆನಕಣ್ಣವರ, ಸಾವಿತ್ರಿ ಹೂಗಾರ, ಗದಗ ವಿಭಾಗಿಯ ನಿಯಂತ್ರಣಾಧಿಕಾರಿ ಪರಶುರಾಮ್.ವೈ.ಗಡೆದ, ವಿಭಾಗೀಯ ತಾಂತ್ರಿಕ ಶಿಲ್ಪಿ ಚಂದ್ರಶೇಖರ ಇಟಗಿ, ವಿಭಾಗೀಯ ಸಂಚಾರಾಧಿಕಾರಿ ಪಿ.ವಿ.ಮೆತ್ರಿ, ಗದಗ ಡಿಪೋ ಮ್ಯಾನೇಜರ ಬಿ.ಎಲ್.ಗೆನ್ನೂರು, ಬೆಟಗೇರಿ ಡಿಪೋ ಮ್ಯಾನೇಜರ್ ರೋಹಿನಿ ಆರ್.ಬಿ, ನಿಲ್ದಾಣಾಧಿಕಾರಿ ಎಂ.ಬಿ. ತಿಮ್ಮನಗೌಡ್ರು , ಸಾರಿಗೆ ನಿಯಂತ್ರಕರಾದ ಎಸ್.ಎಫ್. ಸಂಗಣ್ಣನವರ, ಎ.ಎಸ್. ಅಂಗಡಿ, ಬಿ.ಎನ್.ಪಾಟೀಲ್, ಎಸ್.ಎನ್. ಕಡೆಮನಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 