ವಿಕಲಚೇತನರು ಸರ್ಕಾರಿ ಸೌಲಭ್ಯ ಪಡೆದು ಅಭಿವೃದ್ಧಿಯಾಗಬೇಕು: ಗೋವಿಂದಪ್ಪ
Disabled people should receive government facilities and develop: Govindappa
ಬಳ್ಳಾರಿ 23: ವಿಶೇಷಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಗೋವಿಂದಪ್ಪ ಅವರು ಹೇಳಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಶುಕ್ರವಾರ ಆಯೋಜಿಸಿದ್ದ “ಭಾರತ ಸುಗಮ್ಯ ಯಾತ್ರಾ” ಅರಿವು ಮೂಡಿಸುವ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿಶೇಷಚೇತನರು ಸರ್ಕಾರಿ ಕಚೇರಿಗಳಲ್ಲಿ ಅವರಿಗಿರುವ ಸೌಲಭ್ಯಗಳ ಮಾಹಿತಿ ಹೊಂದಬೇಕು. ಮುಖ್ಯವಾಗಿ ಅವರಿಗೆ ಯಾವುದೇ ಅಡೆತಡೆ ಇಲ್ಲದಂತೆ ಓಡಾಡಲು ಪೂರಕ ಪರಿಸರ ಕಲ್ಪಿಸಿಕೊಟ್ಟು ಮುಖ್ಯವಾಹಿನಿಗೆ ಬರುವಂತೆ ನೋಡಿಕೊಳ್ಳಬೇಕು ಎಂದರು. “ಭಾರತ ಸುಗಮ್ಯ ಯಾತ್ರಾ” ಅರಿವು ಮೂಡಿಸುವ ಜಾಥಾಗೆ ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರರಾದ ಗೌಸಿಯಾ ಬೇಗಂ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯ ಸಿಬಂದ್ದಿಗಳು ಸೇರಿದಂತೆ ವಿಶೇಷಚೇತನರು, ಹಿರಿಯ ನಾಗರೀಕರು ಮತ್ತು ಇತರರು ಭಾಗವಹಿಸಿದ್ದರು.ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ 23:ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.
*ವಿವಿಧ ಯೋಜನೆಗಳು:*
*ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:*
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
*ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:*
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
*ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:*
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಹೊಸದಾಗಿ ಅಳವಡಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
*ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆ:*
2025-26ನೇ ಸಾಲಿನಲ್ಲಿ ತಾಳೆಬೆಳೆ ಬೆಳೆಯ ಆಸಕ್ತಿ ಇರುವ ರೈತರು ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ ಹಿ ತಾಳೆ ಬೆಳೆ ಯೋಜನೆಯಡಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಪ್ರತೀ ಹೆಕ್ಟೇರ್ಗೆ ಶೇ.50 ರಂತೆ ರೂ.29000/-, ಮೊದಲನೇ ವರ್ಷದಿಂದ ನಾಲ್ಕು ವರ್ಷಗಳ ಬೇಸಾಯ ನಿರ್ವಹಣೆ ಕಾರ್ಯಕ್ರಮಕ್ಕೆ, ಪ್ರತೀ ವರ್ಷ ನಿರ್ವಹಣೆಗೆ ರೂ.5250/- ಪ್ರತೀ ಹೆಕ್ಟೇರ್ಗೆ ಸಹಾಯಧನ ನೀಡಲಾಗುವುದು.
ಅಂತರ ಬೆಳೆಗೆ ರೂ.5250/-, ಎತ್ತರವಾದ ತಾಳೆ ಮರಗಳಿಂದ ಹಣ್ಣು ಕಟಾವು ಮಾಡಲು ರೂ.1000/- ಪ್ರತೀ ಟನ್ಗೆ (ಗರಿಷ್ಠ 60ಟನ್ ಮಾತ್ರ) ಸಹಾಯಧನ, ಡೀಸೆಲ್ ಪಂಪ್ ಸೆಟ್ ಕೊಳ್ಳಲು ರೂ.8000/-, ಕೊಳವೆ ಬಾವಿಗೆ ರೂ.50000/- ಸಹಾಯಧನ, ತಾಳೆ ಹಣ್ಣು ಕಟಾವು ಮಾಡುವ ಉಪಕರಣ, ಮೊಟೊರೈಸ್ಡ್ ಚಿಸೆಲ್ ರೂ.15000/-, ತಾಳೆ ಹಣ್ಣು ಕಟಾವು ಏಣಿ ರೂ.5000/-, ಚಾಫ್ ಕಟ್ಟರ್ ರೂ.50000/- , ಟ್ರಾಕ್ಟರ್ ಟ್ರೋಲಿ ಖರೀದಿಸಲು ರೂ.160000/- ಶೇ.50 ರಂತೆ ಸಹಾಯಧನ ಸೌಲಭ್ಯ ನೀಡಲಾಗುವುದು.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು.ಆಸಕ್ತ ತೋಟಗಾರಿಕೆ ರೈತರು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 