ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ ವ್ಯಕ್ತಿತ್ವ ವಿಕಾಸನಕ್ಕೆ ಸಹಕಾರಿ
Discipline and punctuality among students are helpful in personality development
ಲೋಕದರ್ಶನ ವರದಿ
ಹೂವಿನಹಡಗಲಿ 28 : ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಸೇವಾ ಮನೋಭಾವ, ನಾಯಕತ್ವ ಗುಣ ಬೆಳೆಸುವ ಜತೆಗೆ ವ್ಯಕ್ತಿತ್ವ ವಿಕಾಸನಕ್ಕೆ ಸಹಕಾರಿಯಾಗಿದೆ ಎಂದು ಜಿಬಿಆರ್ ಕಾಲೇಜಿನ ಆಡಳಿತ ಮಂಡಳಿ ಅದ್ಯಕ್ಷ ಸಿ. ಮೋಹನ್ ರೆಡ್ಡಿ ಹೇಳಿದರು. ಪಟ್ಟಣದ ಜಿಬಿಆರ್ ಕಾಲೇಜಿನಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಎನ್ನೆಸ್ಸೆಸ್ಸಿ ಗಾಂಧೀಜಿ ಪರಿಕಲ್ಪನೆಯಾಗಿತ್ತು.
ಗ್ರಾಮಗಳ ಸ್ವಚ್ಛತೆ ಮತ್ತು ಜಾಗೃತಿ ಮೂಡಿಸುವ ಕೆಲಸ ಎನ್ನೆಸ್ಸೆಸ್ಸಿನಿಂದ ಸಾಧ್ಯ ಎಂದರು. ಪ್ರಾಚಾರ್ಯ ಎಸ್.ಎಸ್.ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜತೆಗೆ ಕುಟುಂಬ, ಸಮಾಜ ಹಾಗೂ ದೇಶಕ್ಕೆ ನೀಡುವ ಸೇವೆಯು ಅಪಾರವಾಗಿದೆ ಎಂದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈಚಂದ್ರಬಾಬು ಹಾಗೂ ಇತರರು ಮಾತನಾಡಿದರು. ಆಡಳಿತ ಮಂಡಳಿ ಸದಸ್ಯರಾದ ಕೆ.ಎಂ.ಉದಾಸಿ, ಮಲ್ಲಿಕಾರ್ಜುನ ಎಂ, ಎನ್ಎಸ್ಎಸ್ ಅಧಿಕಾರಿಗಳಾದ ಮಾಬು ಸಾಬ್ ಕೆ, ಡಾ.ಶರಣಪ್ಪ, ಪ್ರಿಯಾಂಕ, ದೈಹಿಕ ನಿರ್ದೇಶಕ ಬಡೇಸಾಬನಾಯಕ, ಉಪನ್ಯಾಸಕರಾದ ಸಂಜಯ್, ಅನ್ನದಾನದಪ್ಪ, ಕುಸುಮ, ಶ್ವೇತಾ, ವೀಣಾ, ಆಸ್ಮಾ, ಶೇಕ್ಷಾವಲಿ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು ಇತರರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 