ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಶಿಸ್ತು ಅವಶ್ಯಕ: ಎ.ಕೆ.ಬಸಣ್ಣವರ
Discipline is essential for success in student life: A.K. Basannavara
ಜಮಖಂಡಿ 12: ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಶಿಸ್ತು ಅವಶ್ಯಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸಣ್ಣವರ ಹೇಳಿದರು.
ನಗರದ ಸಮನ್ವಯಾಧಿಕಾರಿಗಳ ಸಭಾ ಭವನದಲ್ಲಿ ನಡೆದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗಾಗಿ ಏರಿ್ಡಸಿದ್ದ ತಾಲೂಕು ಮಟ್ಟದ ಗೀತ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು. ಸ್ಕೌಟ್ಸ್ ಮತ್ತು ಗೈಡ್ಸ್ ಸೇವಾ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮಕ್ಕಳು ಶಿಸ್ತು ಕಲಿಯುತ್ತಾರೆ. ಇದರಿಂದ ಜೀವನದಲ್ಲಿ ಧೈರ್ಯ, ನಾಯಕತ್ವ ಗುಣಗಳು ಬೆಳೆಯುತ್ತವೆ. ಸರ್ಕಾರ ಒದಗಿಸಿರುವ ಈ ಸೌಲಭ್ಯವನ್ನು ಎಲ್ಲ ವಿದ್ಯಾರ್ಥಿಗಳು ಪಡೆದು ವಿದ್ಯಾರ್ಥಿ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.
ಗೀತ ಗಾಯನ ಸ್ಪರ್ಧೆಯ ಆಯೋಜಕರಾದ ಭಾರತ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಮಹಾವೀರ ಜಮಖಂಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ. ಸ್ಪರ್ಧೆಯ ಉದ್ದೇಶ ಮತ್ತು ನಿಯಮಗಳ ಕುರಿತು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಣ ಪರೀವೀಕ್ಷಕಿ ಪಿ.ಎಸ್. ನಂದೇಶ ಹಾಗೂ ತಾಲೂಕು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಭೋಸಲೆ ಭಾಗವಹಿಸಿದ್ದರು. ಎಸ್.ಬಿ. ಬೆಳ್ಳಿಕಟ್ಟಿ ಸ್ವಾಗತಿಸಿದರು. ಎಸ್.ಎಸ್. ಕುಂಬಾರ ನಿರೂಪಿಸಿದರು. ಕೆ.ಎಲ್. ಮಾಳಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 