ದಿಶಾ ನಿರ್ದೇಶಕ ವಿರೂಪಾಕ್ಷಿ ಹನಶಿಗೆ ಸನ್ಮಾನ
Disha director Virupakshi Hanashi honored
ಲೋಕದರ್ಶನ ವರದಿ
ದಿಶಾ ನಿರ್ದೇಶಕ ವಿರೂಪಾಕ್ಷಿ ಹನಶಿಗೆ ಸನ್ಮಾನ
ಉಗರಗೋಳ 15: ಉಗರಗೋಳ ಗ್ರಾಮದ ಹೂಲಿ ಅಜ್ಜನವರ ಮಠದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ (ದಿಶಾ) ಸಮಿತಿ ಬೆಳಗಾವಿ ನಿರ್ದೇಶಕರಾಗಿ ಆಯ್ಕೆಯಾದ ಸಾಮಾಜಿಕ ಕಾರ್ಯಕರ್ತ ವಿರೂಪಾಕ್ಷಿ ಹನಶಿ ಅವರನ್ನು ಮಾತಂಗಿ ಸದ್ಭಕ್ತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ವಿರೂಪಾಕ್ಷಿ ಹನಶಿ ಮಾತನಾಡಿ, 35 ವರ್ಷಗಳಿಂದ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೇನೆ. ವಿವಿಧ ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ. ಅದನ್ನು ಗಮನಿಸಿ ನಿರ್ದೇಶಕನಾಗಿ ಆಯ್ಕೆ ಮಾಡಿರುವುದು ಖುಷಿ ತಂದಿದೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ದಿಶಾ ಸಮಿತಿ ಸಭೆಯಲ್ಲಿ ಧ್ವನಿ ಎತ್ತಿ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದರು.
ಉಗರಗೋಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಕಾಳಪ್ಪನವರ, ಬಿಜೆಪಿ ಎಸ್ಸಿ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ವೈ.ವೈ.ಕಾಳಪ್ಪನವರ, ಅಜ್ಜಪ್ಪ ಕೊಪ್ಪದ, ಹನುಮಂತಪ್ಪ ಮ್ಯಾಗೇರಿ, ಅಪ್ಪು ಕಾಳಪ್ಪನವರ, ವಿರುಪಾಕ್ಷಿ ಚಪ್ಪರಮನಿ, ಪರಶು ಬಸಲಿಂಗನವರ, ಕಲ್ಲಪ್ಪ ಮಿಯಪ್ಪನವರ, ರಮೇಶ್ ಕುರಿ, ರಾಮು ಕಾಳಪ್ಪನವರ, ಯಲ್ಲಪ್ಪ ಮ್ಯಾಗೇರಿ, ಅನಿಲಕುಮಾರ ಕಾಳಪ್ಪನವರ ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 