ಅತೀ ಶೀಘ್ರವಾಗಿ ವಿಚಾರಣೆಗಳನ್ನು ಇತ್ಯರ್ಥ: ಮಾಹಿತಿ ಆಯೋಗದ ಆಯುಕ್ತರು ಶ್ರೀ ಪ್ರಕಾಶ ನಾರಾಯಣ ಚನ್ನಾಳ
Dispose of inquiries as soon as possible: Information Commission Commissioner Shri Prakash Narayan C
ಬೆಳಗಾವಿ, ಮೇ.15: ರಾಜ್ಯ ಮಾಹಿತಿ ಆಯೋಗ ಬೆಳಗಾವಿ ಪೀಠ ಪ್ರಾರಂಭವಾದ ವರ್ಷದಿಂದ ಸ್ವೀಕೃತವಾದ ಮೇಲ್ಮನವಿಗಳ ವಿಚಾರಣೆ ನಡೆಸಿ ಮಾಹಿತಿ ನೀಡುವಲ್ಲಿ ಕರ್ತವ್ಯ ಲೋಪ ಎಸಗಿದ ಮತ್ತು ಆಯೋಗದ ಮೇಲ್ಮನವಿ ವಿಚಾರಣೆಗಳ ನೋಟಿಸಿಗೆ ಸ್ಪಂದನೆ ನೀಡದೆ ಗೈರು ಹಾಜರಾದ ಕಾರಣ ಇಲ್ಲಿಯವರೆಗೆ ಬೆಳಗಾವಿ ವಿಭಾಗದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ 135 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ ಮತ್ತು 94 ಪ್ರಕರಣಗಳಲ್ಲಿ ಮೇಲ್ಮನವಿದಾರರಿಗೆ ಪರಿಹಾರದ ಆದೇಶಗಳನ್ನು ಸಹ ಹೊರಡಿಸಲಾಗಿದೆ ಎಂದು ಮಾಹಿತಿ ಆಯೋಗದ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳರವರು ತಿಳಿಸಿದರು.
ತಾವು ಅಧಿಕಾರ ಸ್ವೀಕರಿಸಿದ ಬಳಿಕ ಒಟ್ಟು 4098 ಪ್ರಕರಣಗಳನ್ನು ಕೈಗೆತ್ತಿಕೊಂಡು ವಿಚಾರಣೆ ನಡೆಸಿ 1600 ಪ್ರಕರಣಗಳನ್ನು ವಿಲೇವಾರಿ ಮಾಡಿರುವುದಾಗಿ ತಿಳಿಸಿದ್ದಾರೆ. ಮಾರ್ಚ ಮತ್ತು ಏಪ್ರೀಲ್ ತಿಂಗಳಲ್ಲಿ ಒಟ್ಟು 1112 ಮೇಲ್ಮನವಿ ಪ್ರಕರಣಗಳ ವಿಚಾರಣೆ ತೆಗೆದುಕೊಂಡಿದ್ದು ಅತೀ ಶೀಘ್ರವಾಗಿ ವಿಚಾರಣೆಗಳನ್ನು ಇತ್ಯರ್ಥ ಮಾಡಲಾಗುವದು ಎಂದು ತಿಳಿಸಿದ್ದಾರೆ. ಇಲಾಖೆ ಅಧಿಕಾರಿಗಳಿಗೆ ಮೇಲ್ಮನವಿದಾರರ ಅರ್ಜಿಗಳಿಗೆ ಸ್ಪಂದಿಸಿ ಕಾಲಮಿತಿಯೊಳಗೆ ಸರಿಯಾದ ಮಾಹಿತಿ ನೀಡಲು ತಿಳಿಸಿರುತ್ತಾರೆ. ಮಾಹಿತಿ ನೀಡದೆ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ್ದಲ್ಲಿ ಶಿಸ್ತು ಕ್ರಮ ಜರುಗಿಸಿ ವಿಚಾರಣೆಗೆ ಶಿಫಾರಸ್ಸು ಮತ್ತು ದಂಡ ವಿಧಿಸಲಾಗುವದು ಎಂದು ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯೋಗ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 