ಸಮಾಜಕ್ಕೆ ಜಂಗಮ ಸಮಾಜದ ಕೊಡುಗೆ ಅಪಾರ: ಸಂಸದ ಸಂಗಣ್ಣ
ಲೋಕದರ್ಶನ ವರದಿ
ಕೊಪ್ಪಳ 10: ಸಮಾಜದಲ್ಲಿ ಜಂಗಮ ಸಮಾಜ ಎಲ್ಲಾ ಸಮಾಜಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುವ ಸಮಾಜ, ಸಮುದಾಯದಲ್ಲಿ ಜಂಗಮ ಸಮುದಾಯದ ಕೊಡುಗೆ ಅಪಾರ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಅವರು ನಗರದ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಮರಿಸ್ವಾಮಿ ಬಡಾವಣೆಯ ಶ್ರೀ ರೇಣುಕಾಚಾರ್ಯ ಮಂದಿರದಲ್ಲಿ 46ನೇ ಮಾಸಿಕ ಅರಿವು-ಆಚಾರ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ಜಂಗಮ ಸಮಾಜ ದಾಸೋಹ-ಜ್ಞಾನ ದಾಸೋಹ ಸಂಸ್ಕೃತಿಯನ್ನು ಹಲವಾರು ವರ್ಷಗಳಿಂದ ನಡೆಸಿಕೊಂಡು ಬಂದಿದೆ ಅದಕ್ಕೆ ಈಗಿನ ವೀರಶೈವ ಮಠಮಾನ್ಯಗಳೇ ಸಾಕ್ಷಿಯಾಗಿದೆ, ಇಂದು ಎಲ್ಲಾ ಸಮಾಜ ಶೈಕ್ಷಣೀಕವಂತರಾಗಬೇಕು ಅಂದಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಸಾನಿಧ್ಯವನ್ನು ಹೆಬ್ಬಾಳ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಮೈನಳ್ಳಿ-ಬಿಕನಳ್ಳಿ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯ ನಾಗಭೂಷಣ ಆರ್.ಸಾಲಿಮಠ ಹಾಗೂ ಪಿಕಾರ್ಡ್ ಬ್ಯಾಂಕ್ ನೂತನ ನಾಮನಿದರ್ೇಶನ ಸದಸ್ಯ ಗವಿಸಿದ್ದಯ್ಯ ಸಸಿಮಠ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಬಸವರಾಜ್ ದಡೇಸೂಗೂರು, ಮಾಜಿ ಶಾಸಕ ಜಿ.ವೀರಪ್ಪ,ಶ್ರೀ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರುದ್ರಯ್ಯ ವಕೀಲರು, ಸಂಸದ ಸಂಗಣ್ಣ ಕರಡಿ ಧರ್ಮಪತ್ನಿ ನಿಂಗಮ್ಮ ಸಂಗಣ್ಣ ಕರಡಿ, ಸಿಸಿಐಎಂ ಸದಸ್ಯರಾದ ಡಾ.ಕುಮಾರಸ್ವಾಮಿ ಬಿ.ಹಿರೇಮಠ, ಸಮಾಜದ ಮುಖಂಡರಾದ ಸಿ.ವಿ.ಕಲ್ಮಠ, ವೀರಯ್ಯಸ್ವಾಮಿ ಬೊಮ್ಮನಾಳ, ವಿ.ಎಂ.ಭೂಸನೂರಮಠ ವಕೀಲರು, ಬಾಲಚಂದ್ರಯ್ಯ, ಕೊಟ್ರಬಸಯ್ಯ ಗಿಣಿಗೇರ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 