ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ
Distribution of Laptops to Village Administrative Officers
ಕಂಪ್ಲಿ 02: ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಬಿಡುಗಡೆಯಾದ ಲ್ಯಾಪ್ ಟಾಪ್ಗಳನ್ನು ಶಾಸಕ ಜೆ.ಎನ್.ಗಣೇಶ ಇವರು ಬುಧವಾರ ವಿತರಿಸಿದರು.
ನಂತರ ಶಾಸಕ ಗಣೇಶ ಅವರು ಮಾತನಾಡಿ, ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯವೈಕರಿ ಹೆಚ್ಚಿಸುವ ಮತ್ತು ಅವರು ಡಾಟಾ ಎಂಟ್ರಿ ಮಾಡಲು ಅನುಕೂಲದ ಹಿತದೃಷ್ಟಿಯಿಂದ ಲ್ಯಾಪ್ಟಾಪ್ಗಳನ್ನು ನೀಡಿದೆ. ಈ ಯೋಜನೆಯ ಸದುಪಯೋಗದೊಂದಿಗೆ ಜನರ ಸೇವೆಯನ್ನು ಅತಿ ವೇಗದಲ್ಲಿ ಮಾಡಲು ಮುಂದಾಗಬೇಕು ಎಂದರು. ಇಲ್ಲಿನ 13 ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ.ಎಸ್.ಚಾಂದ್ಬಾಷಾ, ಸಿ.ಆರ್.ಹನುಮಂತ, ತಹಶೀಲ್ದಾರ್ ಮಂಜುನಾಥ ನಾಯಕ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ, ಆರ್ಐ ಜಗದೀಶ್, ಶಿರಸ್ತೇದಾರ ರಮೇಶ ಸೇರಿದಂತೆ ಮುಖಂಡರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 