ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ Distribution of bus passes to rural journalists


ಬೆಳಗಾವಿ, ಫೆ.12: ಗ್ರಾಮೀಣ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಯೋಜನೆಯಡಿ ಜಿಲ್ಲೆಯ ಕೆಲ ತಾಲ್ಲೂಕುಗಳ ಪತ್ರಕರ್ತರಿಗೆ ಗುರುವಾರ ಉಚಿತ ಬಸ್ ಪಾಸ್ ವಿತರಿಸಲಾಯಿತು. 

ಗ್ರಾಮೀಣ ಪತ್ರಕರ್ತರಿಗೆ ನೆರವಾಗಲೆಂದು ಕಳೆದ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಲಾಗಿತ್ತು. ಇಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ವಾರ್ತಾ ಇಲಾಖೆ ಉಪನಿರ್ದೇಶಕರಾದ ಗುರುನಾಥ ಕಡಬೂರ ಅವರು ಕಿತ್ತೂರು ತಾಲ್ಲೂಕಿನ ಹಿರಿಯ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸಿದರು. ನಂತರ ಮಾತನಾಡಿದ ಅವರು, ತಾಲೂಕು ಮಟ್ಟದ ಅರ್ಹ ಪತ್ರಕರ್ತರು ಅಗತ್ಯ ದಾಖಲೆಗಳೊಂದಿಗೆ ಸರ್ಕಾರದ ಸರ್ಕಾರದ ಸೇವಾಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಬಹುದು. 

 ಈ ಸಂದರ್ಭದಲ್ಲಿ ವಾರ್ತಾ ಸಹಾಯಕರಾದ ವಿಜಯಕುಮಾರ್ ಬೆಟಗೇರಿ, ಪ್ರ.ದ.ಸ. ಎಂ.ಎಲ್‌.ಜಮಾದಾರ ಉಪಸ್ಥಿತರಿದ್ದರು. ಗ್ರಾಮೀಣ ಪತ್ರಕರ್ತರಾದ ಪ್ರದೀಪಕುಮಾರ ಮೇಲಿನಮನಿ, ಉಳವಯ್ಯ ಹಿರೇಮಠ ಅವರಿಗೆ ಬಸ್ ಪಾಸ್ ವಿತರಿಸಲಾಯಿತು. 


Government Scheme Seva Sindhu Website Journalist Eligibility Pass Distribution