ಉತ್ತಮ ಪೊಲೀಸ್ ಸಿಬ್ಬಂದಿಗೆ ಪ್ರಶಂಸನಾ ಪತ್ರ ವಿತರಣೆ
ಬಾಗಲಕೋಟೆ: ಕರ್ತವ್ಯದ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿದ 11 ಜನ ಪೋಲೀಸ್ ಸಿಬ್ಬಂದಿಗಳಿಗೆ ಹಾಗೂ ಒಬ್ಬ ಲಿಪಿಕ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಪ್ರಶಂಸನಾ ಪತ್ರ ವಿತರಿಸಿದರು.
ನವನಗರದ ಜಿಲ್ಲಾ ಪೋಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಪ್ರಶಂಸನಾ ಪತ್ರ ವಿತರಿಸಿ ಮಾತನಾಡಿದ ಅವರು ಗುಪ್ತ ಮಾಹಿತಿ ಸಂಗ್ರಹಿಸುವಲ್ಲಿ, ಅಪರಾಧವನ್ನು ಪತ್ತೆ ಹಚ್ಚುವಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಪೋಲೀಸ್ ಕಾರ್ಯಗಳಲ್ಲಿ ಜನಸ್ನೇಹಿಯಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಇದೇ ರೀತಿ ಎಲ್ಲ ಸಿಬ್ಬಂದಿಗಳು ಉತ್ತಮ ಕಾರ್ಯನಿರ್ವಹಣೆ ಮಾಡುವ ಮೂಲಕ ಮುಂದಿನ ಪ್ರಶಸ್ತಿಗೆ ಪಾತ್ರರಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವ್ಹಿ.ಬಿ.ಕಲಾದಗಿ, ವ್ಹಿ.ಬಿ.ಹಾದಿಮನಿ, ಶ್ರೀಕಾಂತ ಸೊನ್ನದ, ಎಸ್.ಸಿ. ಕೌಲಗಿ, ಬಿ.ವ್ಹಿ. ಹಿರೇಮಠ, ವ್ಹಿ.ಬಿ.ಕುನ್ನಳ್ಳಿ, ಎನ್.ಡಿ.ಸಂತಿವೂರ, ಎಲ್.ಎಚ್.ಬಾಳಿಕಾಯಿ, ಆರ್.ಬಿ.ಕಟಗೇರಿ, ಎಂ.ಎಸ್.ಹುಲ್ಲೂರು, ಎಸ್.ವ್ಹಿ.ಶಿರಬೂರ, ಮಂಜುನಾಥ ಜಾಡರ ಅವರಿಗೆ ಪ್ರಶಂಸನಾ ಪತ್ರವನ್ನು ನೀಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 