ಅಪಘಾತದಲ್ಲಿ ಮೃತ ವಾರಸುದಾರರಿಗೆ ಪರಿಹಾರ ಧನ ವಿತರಣೆ
Distribution of compensation to heirs who died in accidents
ಕಾಗವಾಡ 07: ತಾಲೂಕಿನ ಜುಗೂಳ ಗ್ರಾಮದ ಬೀರೇಶ್ವರ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಯಕ್ಸಂಬಾ ಶಾಖೆಯ ವತಿಯಿಂದ ಇತ್ತೀಚಿಗೆ ಅಪಘಾತದಲ್ಲಿ ನಿಧನರಾದ ಪ್ರಭಾಕರ್ ಕಾಡಗೌಡ ಕಾಡಪೊರೆ ಇವರ ವಾರಸುದಾರರಾದ ಭಾರತಿ ಪ್ರಭಾಕರ್ ಕಾಡಪೂರೆ ಇವರಿಗೆ ಪರಿಹಾರದ ಚೆಕ್ ವಿತರಿಸಲಾಯಿತು.
ಪ್ರಭಾಕರ್ ಇವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಅವರು ಜುಗೂಳ ಶಾಖೆಯಲ್ಲಿ ಸಾಲಗಾರರಾಗಿದ್ದು ಅವರ ಸರಳ ವಾರಸುದಾರ ಭಾರತಿ ಪ್ರಭಾಕರ್ ಕಾಡಪೊರೆ ಇವರಿಗೆ ಸಂಸ್ಥೆಯಲ್ಲಿ ಲಭ್ಯವಿರುವ ಸದಸ್ಯರ ಮರಣೋತ್ತರ ಪರಿಹಾರ ನಿಧಿಯಿಂದ ಸುಮಾರು 75 ಸಾವಿರ ಚೆಕ್ ವಿತರಿಸಲಾಯಿತು. ಜುಗೂಳ ಶಾಖೆಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 