ಉಜ್ವಲ ಪ್ಲಸ್ ಯೋಜನೆಯಡಿ ಸಿಲಿಂಡರ್ ವಿತರಣೆ
ಲೋಕದರ್ಶನ ವರದಿ
ರಾಯಬಾಗ,20: ದೇಶವನ್ನು ಹೊಗೆಮುಕ್ತವನ್ನಾಗಿ ಮಾಡಲು ದೇಶದಲ್ಲಿರುವ ಬಡ ಹೆಣ್ಣು ಮಕ್ಕಳು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಉಜ್ವಲ ಪ್ಲಸ್ ಯೋಜನೆಯಡಿ ಸಿಲಿಂಡರ್ಗಳನ್ನು ವಿತರಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ಪ್ರತಿಯೊಂದು ಬಿಪಿಎಲ್ ಪಡಿತರದಾರರು ಪಡೆದುಕೊಳ್ಳಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ರವಿವಾರ ಪಟ್ಟಣದ ಶಾಸಕರ ಕಚೇರಿಯಲ್ಲಿ ಉಜ್ವಲ ಪ್ಲಸ್ ಯೋಜನೆಯಡಿ 40 ಫಲಾನುಭವಿಗಳಿಗೆ ಸಿಲಿಂಡರ್ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಪ್ರಗತಿಪಥದಲ್ಲಿ ಕೊಂಡಯ್ಯುತ್ತಿದೆ. ರಾಜ್ಯದಲ್ಲಿಯೂ ಈ ಹಿಂದೆ ಮಾಜಿ ಸಿಎಮ್ ಯಡಿಯೂರಪ್ಪನವರ ನೇತೃತ್ವದಲ್ಲಿ ಅನೇಕ ಹೊಸ ಯೋಜನೆಗಳನ್ನು ತಂದು ರಾಜ್ಯವನ್ನು ಅಭಿವೃದ್ಧಿಗೊಳಿಸಿದ್ದರು. ಆದರೆ ಇಂದು ರಾಜ್ಯದಲ್ಲಿರುವ ಸಮೀಶ್ರ ಸರಕಾರ ರಾಜ್ಯ ಅಭಿವೃದ್ಧಿ ಕಡೆಗೆ ಗಮನ ಹರಿಸುತ್ತಿಲ್ಲವೆಂದು ಆರೋಪಿಸಿದರು.
ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಸದಾನಂದ ಹಳಿಂಗಳಿ, ಪ.ಪಂ.ಸದಸ್ಯ ಸುರೇಶ ಮಾಳಿ, ಸದಾನಂದ ಲೋಹಾರ, ಅನೀಲ ಸಾನೆ, ಮಹೇಶ ಕರಮಡಿ, ಯುನುಸ ಮುಲ್ಲಾ ಸೇರಿದಂತೆ ಫಲಾನುಭವಿಗಳು
ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 