ಕೂಲಿಕಾರರಿಗೆ ಸೈಯದ್ರಿಂದ ಆಹಾರ ಸಾಮಗ್ರಿಗಳ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 06: ನಗರದ ಕಿನ್ನಾಳ ರಸ್ತೆಯ ವಿಜಯನಗರ ಬಡಾವಣೆಯಲ್ಲಿ ಸೈಯದ್ ಫೌಂಡೇಶನ್ ಚಾರಿಟೇಬಲ್ ಅಧ್ಯಕ್ಷ ಕೆ.ಎಂ.ಸೈಯದ್ ಅವರು ಬಡ ಕೂಲಿಕಾರರ ಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಗ್ರಿಗಳನ್ನು ವಿತರಿಸಿದರು.
ದೇಶದಲ್ಲಿ ಕೊರೊನಾ ವೈರಸ್ ಹರಡದಂತೆ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಲಾಕ್ ಡೌನ್ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ತೀವ್ರ ಸಂಕಷ್ಟದಲ್ಲಿರುವ ಬಡ ಕೂಲಿಕಾರರಿಗೆ ಉದ್ಯೋಗವಿಲ್ಲದೇ ಇರುವ ಬಡ ಕುಟುಂಬಗಳಿಗೆ ಫೌಂಡೇಶನ್ನಿಂದ ನೆರವು ನೀಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ಖಾಜಾವಲಿ ಬನ್ನಿಕೊಪ್ಪ, ಯುವ ಮುಖಂಡರಾದ ಸಲೀಂ ಅಳವಂಡಿ, ಎಫ್.ಎ.ನೂರಭಾಷ,ಜಾಫರ ಸಾದೀಕ, ಆಸ್ಫಾಕ್ ಗದಗ, ಅನ್ವರಪಾಶಾ, ಕುಮಾರ ಜೆಪಿ ಮಾಕರ್ೇಟ್, ಇಬ್ರಾಹಿಂ, ಜಾವೀದ್ ಮಂಗಳಾಪುರು, ಅಜೀಮ್ ಅತ್ತಾರ್, ಅನ್ವರ್ ಬಾಷ ಮುದಗಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 