ಜಿಲ್ಲಾಡಳಿತದಿಂದ ಮಾಧ್ಯಮ ಪ್ರತಿನಿಧಿಗಳಿಗೆ ಆಹಾರ ಕಿಟ್ ವಿತರಣೆ
ಕಲಬುರಗಿ, ಮೇ 12,ಜಿಲ್ಲಾಡಳಿತದ ಕೋವಿಡ್-19 ಆಹಾರ ಸಮಿತಿ ವತಿಯಿಂದ ಕಲಬುರಗಿ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು/ಪತ್ರಕರ್ತರಿಗೆ ಜಿಲ್ಲಾಧಿಕಾರಿ ಶರತ್.ಬಿ ಮಂಗಳವಾರ ಆಹಾರ ಕಿಟ್ ಗಳನ್ನು ವಿತರಿಸಿದರು.ಒಟ್ಟು 350 ಕಿಟ್ ಗಳನ್ನು ವಿತರಿಸಲಾಗುತ್ತಿದ್ದು, 10 ಕೆಜಿ ಅಕ್ಕಿ, ಎರಡೂವರೆ ಕೆಜಿ ಗೋಧಿ, 1 ಕೆಜಿ ಬೇಳೆ,1 ಲೀಟರ್ ಎಣ್ಣೆ, ಉಪ್ಪು, ಖಾರ, ಅರಿಶಿಣ, ದನಿಯಾ ಪೌಡರ್, ಬಟ್ಟೆ ಸೋಪು, ಮೈ ಸೋಪು ಮುಂತಾದ ಆಹಾರ ಸಾಮಾಗ್ರಿಗಳು ಈ ಕಿಟ್ನಲ್ಲಿವೆ.ಈ ಸಂದರ್ಭದಲ್ಲಿ ಆಹಾರ ಸಮಿತಿ ಅಧ್ಯಕ್ಷ ಎಚ್ ಕೆ ಆರ್ ಡಿ ಬಿ ಜಂಟಿ ನಿರ್ದೇಶಕ ಪ್ರವೀಣ್ ಪ್ರಿಯಾ ಡೇವಿಡ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರ ಪ್ಪ. ಜಿ.ಬಿ, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ದೀಪಕ್, ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿ ಸಿಂಗ್, ವೇದಾ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಡಾ. ರವಿ ಎಸ್. ಮಾಲಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 