ಬೈಲಹೊಂಗಲ: ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ
ಲೋಕದರ್ಶನ ವರದಿ
ಬೈಲಹೊಂಗಲ 26: ಗ್ರಾಮೀಣ ಜನತೆಯ ಆರೋಗ್ಯ ದೃಷ್ಠಿಯಿಂದ ರಾಜ್ಯ ಸರಕಾರ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ್ ವಿತರಿಸುತ್ತಿದ್ದು, ಅವುಗಳ ಸದ್ಭಳಕೆಯಾಗಬೇಕೆಂದು ಸಂಸದೀಯ ಕಾರ್ಯದಶರ್ಿ ಮಹಾಂತೇಶ ಕೌಜಲಗಿ ಹೇಳಿದರು.
ಅವರು ದಿ.25ರಂದು ಪಟ್ಟಣದ ತಹಶೀಲದಾರ ಸಭಾಭವನದಲ್ಲಿ ಕಿತ್ತೂರ, ಬೈಲಹೊಂಗಲ ತಾಲೂಕಿನ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿಯಲ್ಲಿ ಗ್ಯಾಸ್ ವಿತರಿಸಿ, ಮಾತನಾಡಿ, ಸರಕಾರ ಯೋಜನೆಯ ಲಾಭ ಪಡೆಯದವರು ಅಧಿಕಾರಿಗಳನ್ನು ಸಂಪಕರ್ಿಸಿ ಅಜರ್ಿ ಸಲ್ಲಿಸಿ ಲಾಭ ಪಡೆಯಬೇಕೆಂದರು.
ಯೋಜನೆಯನ್ನು ಸಮರ್ಪಕವಾಗಿ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕೆಂದರು.
ತಹಶೀಲದಾರ ಡಾ. ದೊಡ್ಡಪ್ಪ ಹೂಗಾರ ಮಾತನಾಡಿ, ಈಗಾಗಲೇ 637 ಅರ್ಹ ಫಲಾನುಭವಿಗಳಲ್ಲಿ 501 ಫಲಾನುಭವಿಗಳು ಯೋಜನೆಯ ಅನುಕೂಲ ಪಡೆದಿದ್ದಾರ. ಈ ನಿಟ್ಟಿನಲ್ಲಿ ಸಾಂಕೇತಿಕವಾಗಿ 40 ಫಲಾನುಭವಿಗಳಿಗೆ ಗ್ಯಾಸ್ ವಿತರಿಸಲಾಗುತ್ತಿದೆ ಎಂದರು.
ಆಹಾರ ನಿರೀಕ್ಷಕ ಬಸವರಾಜ ವಡ್ಡರಟ್ಟಿ, ಅಕ್ಷರ ದಾಸೋಹ ಅಧಿಕಾರಿ ಪ್ರಕಾಶ ಮೆಳವಂಕಿ, ಆಹಾರ ಸರಬರಾಜು ವ್ಯವಸ್ಥಾಪಕ ನಿಂಗಪ್ಪ ಕಣಬಗರ್ಿ. ಈರಣ್ಣ ಕುಂಬಾರ, ಫಲಾನುಭವಿಗಳು, ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 