ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
Distribution of free note books to government high school children
ಕಂಪ್ಲಿ 05: ಶಿಕ್ಷಕರು ಮಕ್ಕಳಿಗೆ ಉತ್ತಮ ಮಾರ್ಗದರ್ಶಕರು ಜೊತೆಗೆ ಗುಣಾತ್ಮಕ ಶಿಕ್ಷಣ ನೀಡಲು ಮುಂದಾಗಬೇಕು, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜನಾರ್ದನರೆಡ್ಡಿ ಹೇಳಿದರು. ತಾಲೂಕಿನ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ಗುರುವಾರ ನೋಟ್ ಪುಸ್ತಕ ವಿತರಿಸಿ ನಂತರ ಮಾತನಾಡಿ ಮಕ್ಕಳು ತಪ್ಪದೇ ಶಾಲೆಗೆ ಬರಬೆಕು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಕೊಳ್ಳಬೇಕು ಎಂದರು.
ಆದಿಶಕ್ತಿ ಶ್ರೀ ದುರ್ಗಾದೇವಿ ಪೂಜ್ಯ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯವಹಿಸಿ ಮಾತನಾಡಿ ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರದ್ದು ಮಾತ್ರವಲ್ಲದೇ ಪೋಷಕರದ್ದು ಆಗಿದೆ ಎಂದರು ನಿರಂತರವಾಗಿ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದರು ಸಮಾಜ ಸೇವಕ ಮಂಜುನಾಥ ಕಲಾಲ್ ಮಾತನಾಡಿ, ಕಳೆದ 7 ವರ್ಷಗಳಿಂದ 13ಲಕ್ಷ ಕನ್ನಡ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಗಿದೆ. ಶಿಕ್ಷಣದ ಸೇವೆ ಮಾಡಲು, ಅನುವು ಮಾಡಿಕೊಡಬೇಕು ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರದ್ದು ಮಾತ್ರವಲ್ಲದೇ ಪೋಷಕರದ್ದು ಆಗಿದೆ ಎಂದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಮಂಜುನಾಥ ಕಲಾಲ್ ಅವರನ್ನು ಎಸ್ಡಿಎಂಸಿ ವತಿಯಿಂದ ಸನ್ಮಾನ .
ಈ ಸಂದರ್ಭದಲ್ಲಿ ಆನೆಗೊಂದಿಯ ರಾಜವಂಶಸ್ಥರಾದ ಶ್ರೀಮತಿ ರತ್ನ ಶ್ರೀ ಶ್ರೀಕೃಷ್ಣದೇವರಾಯಲು ಗ್ರಾ.ಪಂ ಅಧ್ಯಕ್ಷೆ ಹುಲಿಗೆಮ್ಮ ಉಪಾಧ್ಯಕ್ಷೆ ಪೂರ್ಣಿಮಾ, ಪತ್ರಕರ್ತರಾದ ನಿಂಗಜ್ಜ, ದೇಸಾಯಿ, ಮುಖಂಡರಾದ ಮನೋಹರ ಗೌಡ ಹೇರೂರು, ಡಿ ಕೆ ಅಗೋಲಿ, ಯಮನೂರು ಚೌಡ್ಕಿ, ಟಿ.ಜಿ ಬಾಬು, ಜಿಲಾನ್ ಪಾಷಾ, ಪಂಪಣ್ಣ ನಾಯಕ್, ದುರ್ಗಪ್ಪ ದಳಪತಿ, ಬಾಬು ರೆಡ್ಡಿ, ಬಾಲಪ್ಪ, ಶಿವಪ್ರಸಾದ್ ರೆಡ್ಡಿ, ಕಾಶಿನಾಥ, ಪ್ರಸಾದ್, ಲೋಕೇಶ್ ವೆಂಕಟೇಶ್, ರಾಜಶೇಖರ, ಶ್ರೀ ಕೃಷ್ಣ ಪಾಟೀಲ್, ಬಸವರಾಜ್ ಹನುಮೇಶ್ ನುವೇಶ ಮಲ್ಲಾಪುರ, ಯಮನಪ್ಪ, ದೇವರಾಜ ಪರಶುರಾಮ್ ಸೇರಿದಂತೆ ಮುಖಂಡರು ಮತ್ತು ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 