ದಿನಸಿ ಸಾಮಗ್ರಿಗಳ ಪೊಟ್ಟಣ ವಿತರಿಸಿದ ಸಚಿವ ವಿ.ಸೋಮಣ್ಣ
ಬೆಂಗಳೂರು, ಮಾ. 30,ಲಾಕ್ಡೌನ್ನಿಂದಾಗಿ ಜನಜೀವನ ಅಸ್ತವ್ಯಸ್ತವಾಗಿರುವುದರಿಂದ ಆಹಾರದ ಕೊರತೆಯಾಗದಂತೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ವಸತಿ ಸಚಿವ ವಿ.ಸೋಮಣ್ಣ ಕ್ಷೇತ್ರದ ಬಡಜನರಿಗೆ ಇಂದು ಉಚಿತ ದಿನಸಿ ಸಾಮಾಗ್ರಿ ವಿತರಿಸಿದರು.ವಿಜಯನಗರದ ಬಿಜಿಎಸ್ ಮೈದಾನದಲ್ಲಿ ವಿಜಯನಗರ ಹಾಗೂ ಗೋವಿಂದರಾಜನಗರ ಕ್ಷೇತ್ರಗಳ ಜನತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಅಕ್ಕಿ, ಗೋದಿ, ಎಣ್ಣೆ, ತೊಗರಿ ಬೇಳೆ ಸೇರಿದಂತೆ ಇತರೆ ದಿನಸಿ ಸಾಮಾಗ್ರಿಗಳನ್ನೊಳಗೊಂಡ ಪೊಟ್ಟಣಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ವಿ.ಸೋಮಣ್ಣ, ಸುಮಾರು ಹತ್ತು ಸಾವಿರ ಬಡವರಿಗೆ ದಿನಸಿ ಸಾಮಾಗ್ರಿಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಬಿ ಜಿ ಎಸ್ ಮೈದಾನದಲ್ಲಿ ಕೆಲವರಿಗೆ ಸಾಂಕೇತಿಕವಾಗಿ ದಿನಸಿ ವಿತರಣೆ ಮಾಡಲಾಗಿದ್ದು, ಬಳಿಕ ಮನೆ ಮನೆ ತೆರಳಿ ದಿನಸಿ ಸಾಮಾಗ್ರಿಗಳ ವಿತರಿಸಲಾಗುವುದು ಎಂದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 