ಗಂಗಾ ಕಲ್ಯಾಣ ಯೋಜನೆಯಡಿ ಮೋಟಾರ್ ಪಂಪ್ ವಿತರಣೆ
Distribution of motor pumps under Ganga Kalyan Yojana
ಲೋಕದರ್ಶನ ವರದಿ
ಹೂವಿನಹಡಗಲಿ 09: ಪಟ್ಟಣದ ತಾಲೂಕು ಪಂಚಾಯತ್ ಶಾಸಕರ ಜನ ಸಂಪರ್ಕ ಕಚೇರಿಯ ಆವರಣದಲ್ಲಿ ಮಂಗಳವಾರ ಎಸ್.ಟಿ. ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪು, ಮೋಟಾರು, ಕೇಬಲ್ ಗಳನ್ನು ವಿತರಿಸಿದರು. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಶಾಸಕ ಎಲ್.ಕೃಷ್ಣನಾಯಕ ಅವರು ಎಸ್.ಟಿ.ಫಲಾನುಭವಿಗಳಿಗೆ ಉಚಿತ ಕೊಳವರ ಬಾವಿಗೆ ಮೋಟಾರು, ಪಂಪ್, ಕೇಬಲ್ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಶಾಸಕ ಕೃಷ್ಣನಾಯಕ ರೈತರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ ಎಂದರು.ಇದೇ ವೇಳೆ ತಹಶಿಲ್ದಾರರ ಹೆಚ್.ಎಂ.ಗುರುಬಸವರಾಜ, ಮುಖ್ಯಾಧಿಕಾರಿ ಹನುಮಂತಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತರು, ರಾಜಕೀಯ ಮುಖಂಡರು ಇದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 