ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ ವಿತರಣೆ
Distribution of motorized three-wheelers to the specially-abled
ಕೊಪ್ಪಳ 27: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಸರ್ಗಳ ಸ್ವಾಸ್ಥ್ಯ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮಕ್ಕೆ ಕೊಪ್ಪಳ ಸಂಸದರಾದ ಕೆ.ರಾಜಶೇಖರ್ ಬಸವರಾಜ ಹಿಟ್ನಾಳ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿಶೇಷ ಚೇತನರ ಸ್ವಾವಲಂಬನೆ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರವು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಇದರ ಭಾಗವಾಗಿ ಇಂದು ಜಿಲ್ಲೆಯಲ್ಲಿ ವಿತರಣೆ ಮಾಡಲಾದ ಮೋಟಾರು ಚಾಲಿತ ತ್ರಿಚಕ್ರ ವಾಹನಗಳು, ಈ ಫಲಾನುಭವಿಗಳ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗಲಿವೆ. ಶಿಕ್ಷಣ, ಉದ್ಯೋಗ ಹಾಗೂ ಸ್ವಯಂ ಉದ್ಯಮ ಚಟುವಟಿಕೆಗಳಿಗೆ ಈ ವಾಹನಗಳು ಸಹಕಾರಿಯಾಗಲಿವೆ ಮತ್ತು ವಿಶೇಷ ಚೇತನರು ಆತ್ಮವಿಶ್ವಾಸದಿಂದ ಬದುಕನ್ನು ಸಾಗಿಸಲು ಈ ವಾಹನಗಳು ಅವರಿಗೆ ನೆರವಾಗಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಕೊಪ್ಪಳ ಕಾರ್ಖಾನೆ ಮತ್ತು ಬಾಯ್ಲರ್ಗಳ ಸ್ವಾಸ್ಥ್ಯ ಇಲಾಖೆಯ ಸಹಾಯಕ ನಿರ್ದೇಶಕ ವಿಜಯಕುಮಾರ ಬಿ., ಗಂಗಾವತಿ ಕಾರ್ಮಿಕ ನೀರೀಕ್ಷಕ ಎಂ.ಅಶೋಕ, ಕೊಪ್ಪಳ ಕಾರ್ಮಿಕ ನೀರೀಕ್ಷಕಿ ಮಂಜುಳಾ ವಿಶ್ವನಾಥ, ಕುಷ್ಟಗಿ ಕಾರ್ಮಿಕ ನೀರೀಕ್ಷಕಿ ನಿವೇದಿತಾ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇತರೆ ಜನಪ್ರತಿನಿಧಿಗಳು, ವಿಶೇಷ ಚೇತನರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 