ರೈತರಿಗೆ ರಿಯಾಯತಿ ದರದಲ್ಲಿ ಬೀಜ ವಿತರಣೆ
ಫೋಟೊ: 27 ರಾಯಬಾಗ 1 ಫೋಟೊ ಶಿಷರ್ಿಕೆ: ರಾಯಬಾಗ: ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ರೈತರಿಗೆ ರಿಯಾಯತಿ ದರದಲ್ಲಿ ಬೀಜಗಳ
ರಾಯಬಾಗ 27: ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು ರೈತರು ತಮ್ಮ ಜಮೀನದಲ್ಲಿರುವ ಮುಂಗಾರು ಬೆಳೆ ಕಟಾವು ಮಾಡಿ ಹಿಂಗಾರು ಬೆಳೆ ಬೆಳೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಬಿತ್ತನೆ ಮಾಡಲು ಕಡಲೆ ಬೀಜ ಮತ್ತು ಜೋಳದ ಬೀಜಗಳನ್ನು ರಿಯಾಯತಿ ದರದಲ್ಲಿ ನೀಡಲಾಗುತ್ತಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೃಷಿ ಇಲಾಖೆ ಸಹಾಯಕ ನಿದರ್ೇಶಕ ಎಮ್.ಸಿ.ಮನ್ನಿಕೇರಿ ಹೇಳಿದರು.
ಗುರುವಾರ ಪಟ್ಟಣದ ಕೃಷಿ ಇಲಾಖೆಯಲ್ಲಿ ರೈತರಿಗೆ ಹಿಂಗಾರು ಬೆಳೆ ಬಿತ್ತನೆಗೆ ಕಡಲೆ ಬೀಜ ಮತ್ತು ಜೋಳ ಬೀಜಗಳನ್ನು ರಿಯಾಯತಿ ದರದಲ್ಲಿ ವಿತರಿಸಿ ಮಾತನಾಡಿದ ಅವರು, ಹಿಂಗಾರು ಬೆಳೆ ಬೆಳೆಯಲು ಉತ್ತಮ ಮಳೆಯಾಗುತ್ತಿದೆ. ರೈತರು ರಿಯಾಯತಿ ದರದಲ್ಲಿ ಬೀಜ ಖರೀದಿಸಲು ತಮ್ಮ ಜಮೀನದ ಖಾತೆ ಉತಾರ, ಆಧಾರ ಚೀಟಿ, ಒಂದು ಪಾಸ್ಪೋಟರ್್ ಸೈಜ್ ಪೋಟೊ ಮತ್ತು ಬ್ಯಾಂಕ್ ಪಾಸ್ಬುಕ್ ನೀಡಿ ಅಜರ್ಿ ಸಲ್ಲಿಸಿ ಬೀಜಗಳನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ರಾಯಬಾಗ ಮತ್ತು ಕುಡಚಿ ಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳನ್ನು ಪಡೆದುಕೊಳ್ಳಬೇಕೆಂದರು. ಬುಧವಾರ ತಾಲೂಕಿನ ಕುಡಚಿಯಲ್ಲಿ 123.04 ಮೀಮೀ, ರಾಯಬಾಗ 69.08 ಮೀಮೀ, ಹಾರೂಗೇರಿ 62.06 ಮೀಮೀ, ಯಲ್ಪಾರಟ್ಟಿ 75 ಮೀಮೀ, ಸವಸುದ್ದಿ 35.02ಮೀಮೀ, ಮುಗಳಖೋಡ 28 ಮೀಮೀ, ಮತ್ತು ಬಾವಚಿ 25.04ಮೀಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದರು.
ಕೃಷಿ ಇಲಾಖೆ ಅಧಿಕಾರಿಗಳಾದ ಬಿ.ಎ.ಕಿಲ್ಲೇದಾರ, ಎಮ್.ಎಸ್.ಸನದಿ, ಗುರುಸಿದ್ದ ಮುದ್ದಪ್ಪ ಡಿ.ಎಸ್.ಯಲಮೇಲಿ, ಡಿ.ಎ.ರಜಪೂತ, ಬಿ.ಎನ್.ಕೋಳಿ ಸೇರಿದಂತೆ ಅನೇಕರು ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 