ಆಯನೂರು ಮಂಜುನಾಥ್ ನೇತೃತ್ವದಲ್ಲಿ ಕಾರ್ಮಿಕರಿಗೆ ತರಕಾರಿ ವಿತರಣೆ
ಶಿವಮೊಗ್ಗ, ಏ.17, ನಗರದ ಇಂದಿರಾ ಬಡಾವಣೆಯ ಕೂಲಿಕಾರ್ಮಿಕರಿಗೆ ಜನಶಕ್ತಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮಾಜಿ ಸಂಸದ, ಮೇಲ್ಮನೆ ಸದಸ್ಯರೂ ಆಗಿರುವ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಉಚಿತ ತರಕಾರಿಗಳನ್ನು ಇಂದು ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.ಆಯನೂರು ಮಂಜುನಾಥ್ ಮಾತನಾಡಿ, ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡವರು ಕೂಲಿ ಕಾರ್ಮಿಕರು ಸೇರಿದಂತೆ ಯಾರಿಗೂ ಆಹಾರದ ಕೊರತೆಯಾಗದಂತೆ ಸರ್ಕಾರ ದಿಟ್ಟ ಕ್ರಮಕೈಗೊಂಡಿದೆ. ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚೆತ್ತುಕೊಳ್ಳಲಾಗಿದೆ.
ಉಚಿತ ಪಡಿತರವನ್ನು ಸಹ ವಿತರಿಸಲಾಗುತ್ತಿದೆ. ಕೂಲಿಕಾರ್ಮಿಕರು ಬಡವರಿಗೆ ಸಹಕರಿಸಲು ಸರ್ಕಾರದ ಜೊತೆ ಕೈಜೋಡಿಸುವವರಿಗೆ ಮುಕ್ತ ಅವಕಾಶವಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆ ಸರ್ಕಾರದ ಸೂಚನೆ ನಿರ್ದೇಶನ ಪಾಲಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಜನಶಕ್ತಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಪರಂಧಾಮ ರೆಡ್ಡಿ, ಶಲ ರವಿ,ಪ್ರಧಾನ ಕಾರ್ಯದರ್ಶಿ ಪ್ರಕಾಶ, ಜನಶಕ್ತಿ ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 