ಗ್ಯಾಸ್ ಬ್ಲಾಸ್ಟ್‌ ಮಳಿಗೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ ಕೆ.

ಗ್ಯಾಸ್ ಬ್ಲಾಸ್ಟ್‌ ಮಳಿಗೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ ಕೆ. District Collector Dr. Anand K. visited and inspected the gas blast shop.

ಲೋಕದರ್ಶನ ವರದಿ 

       ವಿಜಯಪುರ, ಮೇ.14: ನಗರದ ಸರಾಫ್ ಬಜಾರ್ ನ ಚಿನ್ನಾಭರಣ ಮಳಿಗೆಯಲ್ಲಿ ಗುರುವಾರ ಏಕಾಏಕಿ ಗ್ಯಾಸ್ ಬ್ಲಾಸ್ಟ್‌ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಭೇಟಿ ನೀಡಿ ಪರೀಶೀಲಿಸಿದರು. 

ಚಿನ್ನಾಭರಣ ಮಳಿಗೆಯಲ್ಲಿದ್ದ ಗ್ಯಾಸ್ ಹೇಗೆ ಬ್ಲಾಸ್ಟ್‌ ಆಯಿತು ಎಂಬ ಮಾಹಿತಿಯನ್ನು ಕಲೆ ಹಾಕಿದರು. ಜೊತೆಗೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಸರಾಫ್ ಬಜಾರ್ ಸಂಘದ ಪದಾಧಿಕಾರಿಗಳು ಹಾಗೂ ಚಿನ್ನಾ ಭರಣ ಮಳಿಗೆಯ ಮಾಲಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.