ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ
District Farmers' Society Executive Committee Meeting
ಕಾರವಾರ, ಏ.24 : ಶಿರಸಿಯ ತೋಟಗಾರಿಕೆ ಇಲಾಖೆಯ ಉಪ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನೂತನ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಪ್ರಥಮ ಸಭೆ ನಾರಾಯಣ ಹೆಗಡೆ ಕರಿಕಲ್ ರವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ಸಭೆಯಲ್ಲಿ ಕೃಷಿಕರಿಗಾಗಿ ಕೃಷಿ ಸಂಬಂಧಿತ ವಿವಿಧ ಇಲಾಖೆಗಳಾದ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಅರಣ್ಯ ಹಾಗೂ ಕೃಷಿ ಮಾರುಕಟ್ಟೆ ಇಲಾಖೆಗಳ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು. ಮುಖ್ಯವಾಗಿ ಹವಾಮಾನ ಆಧಾರಿತ ಬೆಳೆ ವಿಮೆ ಜಮಾ ಆಗದಿರುವ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಿ ಈ ಬಗ್ಗೆ ತಕ್ಷಣ ಬೆಳೆ ವಿಮೆ ಬಿಡುಗಡೆ ಕುರಿತು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ಕಾಡು ಪ್ರಾಣಿಗಳಿಂದ ಅದರಲ್ಲೂ ಮುಖ್ಯವಾಗಿ ಮಂಗಗಳ ಹಾವಳಿಯಿಂದ ಬೆಳೆ ಹಾನಿ ಸಂಭವಿಸುತ್ತಿದ್ದು ಈ ಬಗ್ಗೆ ಅರಣ್ಯ ಇಲಾಖೆ ಕ್ರಮವಹಿಸಲು ಸಭೆಯಲ್ಲಿ ಒತ್ತಾಯ ಮಾಡಲಾಯಿತು. ಕಬ್ಬಿನ ಬೆಳೆಯನ್ನೂ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸುವ ಮತ್ತು ಬೆಳೆ ಸಾಲವನ್ನು 5 ಲಕ್ಷದವರೆಗೆ ನೀಡಲು ಕೆ.ಡಿ.ಸಿ.ಸಿ ಬ್ಯಾಂಕಿಗೆ ಸೂಚಿಸಲು ಆಗ್ರಹಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 