ಜಿಲಾ ್ಲಕಾನೂನು ಅರಿವು ಕಾರ್ಯಕ್ರಮ
District Legal Awareness Program
ಜಿಲಾ ್ಲಕಾನೂನು ಅರಿವು ಕಾರ್ಯಕ್ರಮ
ಕಾರವಾರ 25: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರವಾರ, ಜಿಲ್ಲಾ ಪೋಲಿಸ್ ಇಲಾಖೆ, ಕಾರವಾರ, ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ ಯು ಕಾಲೇಜ್, ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತು ಜಾಗೃತಿ ಮತ್ತು ಮಾದಕವಸ್ತು ಮುಕ್ತ ಭಾರತಕ್ಕಾಗಿ ಸ್ವಾಸ್ಥ್ಯ ಸಂಚರಣೆ ಯೋಜನೆ, 2025 (ಓಂಐಖಂ-ಆಂಘಓ’ ಖಛಿಜಟಜ-2025) ಅಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮವು ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ.ಯು. ಕಾಲೇಜ್, ಕಾರವಾರದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಕವಿತಾ ಶಿವರಾಯ ಉಂಡೋಡಿ ಉದ್ಘಾಟಿಸಿದರು. ಪ್ರೀಮಿಯರ್ ಸೈನ್ಸ್ ಎಂಡ್ ಕಾಮರ್ಸ್ ಪಿ. ಯು. ಕಾಲೇಜ್ ನ ಪ್ರಾಂಶುಪಾಲ ಆರ್. ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಪೊಲೀಸ್ ಉಪಾಧೀಕ್ಷಕ ಎಸ್.ವಿ.ಗೀರೀಶ್ ಉಪಸ್ಥಿತರಿದ್ದರು. ಶಿರವಾಡದ ಮಾರಿಯಾ ಮಾಗೋ ಫ್ಲೋರಾ ಆಸ್ಪತ್ರೆಯ ವೈದ್ಯೆ ಡಾ. ನಮಿತಾ ವರ್ಗೀಸ್ ಉಪನ್ಯಾಸ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 