ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ: ತ್ರೈಮಾಸಿಕ ಪ್ರಗತಿ ಪರೀಶೀಲನೆ
District Level Advisory Committee Meeting: Quarterly Progress Review
ಬೆಳಗಾವಿ 23: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಬೆಳಗಾವಿಯಲ್ಲಿ, ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯನ್ನು ಇಂದಿನ ದಿನ ದಿ. 22ರಂದು ಸಂಸ್ಥೆಯ ಆವರಣದಲ್ಲಿ ಮಾಡಲಾಯಿತು.
ಈ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದಂತ ಬೆಳಗಾವಿ ಜಿಲ್ಲೆಯ ಜಿಲ್ಲಾ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂದೆ ಅವರ ಅಧ್ಯಕ್ಷತೆಯಲ್ಲಿ ಸಭೆಯು ಜರುಗಿತು. ಇವರು ಸಂಸ್ಥೆಯ 25 - 26 ನೇ ಸಾಲಿನ ಮೊದಲ ತ್ರೈಮಾಸಿಕ ಪ್ರಗತಿಯನ್ನು ಪರೀಶೀಲಿಸಿದರು. ಅದರಲ್ಲಿಯೂ ನಡೆದ ತರಬೇತಿಗಳಾವುವು, ಯಾವ ಯಾವ ಹೊಸ ತರಬೇತಿಗಳನ್ನು ಹಮ್ಮಿಕೊಳ್ಳಲಾಯಿತು, ಅದರಲ್ಲಿ ಎಷ್ಟು ಜನ ಉತ್ತಮ ರೀತಿಯಲ್ಲಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ, ಅದರ ಜೊತೆಗೆ ಬ್ಯಾಂಕಿನಿಂದ ಸಾಲ ಪಡೆದವರ ಸಂಖ್ಯೆ ಎಷ್ಟು. ಸದ್ಯ ಯಾವ ಯಾವ ತರಬೇತಿಗಳು ಸಂಸ್ಥೆಯಲ್ಲಿ ನಡೆಯುತ್ತಿವೆ. ಸಂಸ್ಥೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಯಾವ ರೀತಿ ನೀಡುತ್ತಿದ್ದಾರೆ. ತರಬೇತಿಯು ಉತ್ತಮ ರೀತಿಯಲ್ಲಿ ನಡೆಯುತ್ತಿವೆ ಎಂಬುದರ ಕುರಿತು ಸವಿಸ್ತಾರವಾದಂತ ಚರ್ಚೆಯನ್ನು ಮಾಡಲಾಯಿತು. ಜೊತೆಗೆ ಶಿಬಿರಾರ್ಥಿಗಳನ್ನು ಮಾತನಾಡಿಸಿ ಖುದ್ದಾಗಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿ, ಸಂಸ್ಥೆಯ ಕುಂದು ಕೊರತೆಗಳನ್ನು ಪರೀಶೀಲಿಸಿದರು. ಸಭೆಯ ಇನ್ನಿತರೆ ಸದಸ್ಯರು ಸಹ ಉಪಸ್ಥಿತರಿದ್ದರು.
ಬೆಳಗಾವಿಯ ಜಿಲ್ಲಾ ಪಂಚಾಯತನ ಯೋಜನಾ ನೀರ್ದೇಶಕ ಆರ್. ಎನ್. ಬಂಗಾರ್ಪನವರ, ವಿದ್ಯಾ ರೀಜನಲ್ ಮ್ಯಾನೇಜರ್ ಕೆನರಾ ಬ್ಯಾಂಕ್ ಬೆಳಗಾವಿ, ಕೆನರಾ ಬ್ಯಾಂಕ್ ನ ಲೀಡ ಡಿಸ್ಟ್ರಿಕ್ಟ್ ಚೀಫ್ ಮ್ಯಾನೇಜರ್ ಆದಂತಹ ಪ್ರಶಾಂತ್ ಗೋಡ್ಕೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಬೆಳಗಾವಿಯ ಆರ್. ಎಂ. ಆದ ಶ್ರೀ ಎಸ್ ಬಿ. ಹುಲಮನಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಕ್ಷೇತ್ರೀಯ ಕಾರ್ಯಲಯ ಗೋಕಾಕನ ಸೀನಿಯರ್ ಮ್ಯಾನೇಜರ್ ಆದಂತಹ ರಾಕೇಶ್ ಬಿ.ಪಿ., ಸಂಸ್ಥೆ ನೀರ್ದೇಶಕ ಪ್ರವೀಣ್ ಕೆ.ಎಸ್. ಇವರುಗಳ ಉಪಸ್ಥಿತಿಯಲ್ಲಿ ಇವತ್ತಿನ ಸಭೆಯು ನಡೆಯಿತು.
ಸಭೆಯಲ್ಲಿ ಸಂಸ್ಥೆಯ ಕಾರ್ಯ ವೈಖರಿಯನ್ನ ಗಮನಿಸಿದ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದಂತಹ ರಾಹುಲ್ ಶಿಂದೆ ಅವರು ಸಂಸ್ಥೆಯ ಕಾರ್ಯವೈಖರಿಯ ಕುರಿತು ಮಾತನಾಡಿ, ಉತ್ತಮ ರೀತಿಯಲ್ಲಿ ತರಬೇತಿಗಳನ್ನ ನಡೆಸುತ್ತಿದ್ದು ಇದೇ ರೀತಿ ಉತ್ತಮ ಹಾಗೂ ನವೀನ ಕೌಶಲ್ಯಗಳನ್ನ ಜನರಿಗೆ ನಿರುದ್ಯೋಗಿಗಳಿಗೆ ನೀಡಿ ಎಂದು ತಿಳಿಸಿ ಶುಭ ಹಾರೈಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 