ಎಸ್.ಎಮ್. ನೆರಬೆಂಚಿಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪ್ರದಾನ
District Rajyotsava Award presented to S.M. Nerabenchi
ವಿಜಯಪುರ 04; ಇತ್ತೀಚೆಗೆ ಜಿಲ್ಲಾ ಸಾಹಿತ್ಯ ಪರಿಷತ್ತು ವತಿಯಿಂದ 70ನೇ ಕನ್ನಡ ರಾಜೋತ್ಸವದ ಅಂಗವಾಗಿ ಸಂಕೀರ್ಣ (ಶಿಕ್ಷಣ, ಸಾಹಿತ್ಯ ಸಂಘಟನೆ) ಕ್ಷೇತ್ರದಲ್ಲಿನ ಸಾಧನೆಗಾಗಿ ಕೊಡಮಾಡುವ ಜಿಲ್ಲಾ ರಾಜೋತ್ಸವ ಪ್ರಶಸ್ತಿಯನ್ನು ವಿಜಯಪುರದ ಗಾಂಧೀಭವನದಲ್ಲಿ ನಡೆದ ಸಮಾರಂಭದಲ್ಲಿ ಎಸ್.ಎಂ.ನೆರಬೆಂಚಿ ರವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಇವರು 3 ವರ್ಷಗಳ ಕಾಲ ಎಲೇಕ್ಟಿಕಲ್ ಇಂಜನೀಯರಾಗಿ ಪುಣೆ, ಬೆಂಗಳೂರನಲ್ಲಿ ಮೊದಲು ಕೆಲಸ ಮಾಡಿದರು. ತದ ನಂತರ ಸಿವಿಲ್ ಗುತ್ತಿಗೆದಾರನಾಗಿ 3ವರ್ಷ ಸೇವೆ ಸಲ್ಲಿಸಿದ್ದಾರೆ. 23 ವರ್ಷದ ಹಿಂದೆ ತಾಲೂಕಿನ ಬಳಬಟ್ಟಿಯ ಗ್ರಾಮದಲ್ಲಿ ಇವರು ನಿರ್ಮಿಸಿದ ಸರ್ಕಾರಿ ಪ್ರೌಢಶಾಲೆ ಇಂದಿಗೂ ಗಟ್ಟಿಮುಟ್ಟಾಗಿದೆ. ಇದು ಇವರ ಕರ್ತವ್ಯ ಪ್ರಜ್ಞೆಗೆ ಸಾಕ್ಷಿಯಾಗಿದೆ. ಪಟ್ಟಣದ ವಿದ್ಯಾರ್ಥಿಗಳು ದೂರದ ಪರಸ್ಥಳಗಳಿಗೆ ಹೋಗಿ ಐಟಿಐ ಕಲಿಯುವ ಪರಿಸ್ಥಿತಿ ಇತ್ತು. ಇವರು 2002ರಲ್ಲಿ ಬಿಬಿಆರ್ ಐಟಿಐ ಸಂಸ್ಥೆ ಸ್ಥಾಪಿಸಿ ಸ್ಥಳೀಯ ವಿದ್ಯಾರ್ಥಿಗಳ ಅಲೆದಾಟವನ್ನು ತಪ್ಪಿಸಿದರು.ಇವರು ಜನರಲ್ಲಿ ಜಾಗೃತಿ ಮೂಡಿಸುವಂಥ ಕೆಲವು ಕಥೆ, ಕವನ, ಲೇಖನಗಳನ್ನೂ ಬರೆದಿದ್ದಾರೆ. ಧಾರವಾಡ ಆಕಾಶವಾಣಿ ಕೇಂದ್ರವು ಅವುಗಳನ್ನು ಪ್ರಸಾರ ಮಾಡಿದೆ. ರಾಜ್ಯ ಐಟಿಐ ಕಾಲೇಜುಗಳ ಸಂಘದ ಅಧ್ಯಕ್ಷರಾಗಿಯೂ 2016ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಖಾಸಗಿ ಐಟಿಐ ನೌಕರರು ಹಾಗೂ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ರಾಜ್ಯ ಮಟ್ಟದ ಕೆಲವು ಹೋರಾಟಗಳನ್ನು ಸಂಘಟಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 