ಗೌರವಾನ್ವಿತ ಕರ್ನಾಟಕದ ರಾಜ್ಯಪಾಲರ ಜಿಲ್ಲಾ ಪ್ರವಾಸ

ಗೌರವಾನ್ವಿತ ಕರ್ನಾಟಕದ ರಾಜ್ಯಪಾಲರ ಜಿಲ್ಲಾ ಪ್ರವಾಸ District Tour of the Honorable Governor of Karnataka

ಲೋಕದರ್ಶನ ವರದಿ 

ಗದಗ (ಕರ್ನಾಟಕ ವಾರ್ತೆ) ಜುಲೈ 21:  ಗೌರವಾನ್ವಿತ  ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ ಗೆಹ್ಲೋಟ್ ಅವರು ಜುಲೈ 23 ರಂದು ಬೆಳಿಗ್ಗೆ 9.15 ಗಂಟೆಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.  ಅಲ್ಲಿಂದ ರಸ್ತೆ ಮಾರ್ಗವಾಗಿ ಪ್ರಯಾಣಿಸಿ ಬೆಳಿಗ್ಗೆ 10.50 ಗಂಟೆಗೆ ಗದಗ ಜಿಲ್ಲೆಯ ಗಜೇಂದ್ರಗಡದ ಪ್ರವಾಸಿ ಮಂದಿರಕ್ಕೆ  ತಲುಪಲಿದ್ದಾರೆ.  ನಂತರ  ಬೆಳಿಗ್ಗೆ 11.15 ಗಂಟೆಗೆ  ಗಜೇಂದ್ರಗಡದ ಟಿ.ಟಿ.ಡಿ. ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ  ಭಗವಾನ್ ಮಹಾವೀರ್ ಜೈನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.  ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2 ಗಂಟೆಗೆ  ರಸ್ತೆ ಮಾರ್ಗವಾಗಿ  ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು     ಪ್ರಕಟಣೆ ತಿಳಿಸಿದೆ.