ಇಬ್ಭಾಗವಾದ ಜಮ್ಮು ಕಾಶ್ಮೀರ: ಲಡಾಕ್ಗೆ ಕೇಂದ್ರಾಡಳಿತ ಸ್ಥಾನಮಾನ
ನವದೆಹಲಿ, ಆಗಸ್ಟ್ 5 ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 (3) ನೇ ವಿಧಿಯನ್ನು ರದ್ದುಗೊಳಿಸುವ ಹಾಗೂ ಲಡಾಖ್ ಮತ್ತು ಜಮ್ಮು -ಕಾಶ್ಮೀರ ಎಂಬ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಕ್ಕೆ ಅವಕಾಶ ಮಾಡಿಕೊಡುವ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರತಿಪಕ್ಷಗಳ ಕೋಲಾಹಲದ ನಡುವೆ ಇಂದು ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ. ಹೊಸ ಮಸೂದೆಯ ಪ್ರಕಾರ, ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರ ಎಂಬ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ಅಸ್ತಿತ್ವಕ್ಕೆ ಬರಲಿದ್ದು, ಅದಕ್ಕೆ ಹೊಸ ಮಸೂದೆ ಅವಕಾಶ ಕಲ್ಪಿಸಲಿದೆ. ಸಚಿವ ಶಾ ಅವರು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆ, 2019 ಅನ್ನು ಸದನದಲ್ಲಿ ಮಂಡಿಸಿದರು. ಇದರ ಪ್ರಕಾರ ಶಾಸಕಾಂಗವಿಲ್ಲದ ಲಡಾಖ್ಗೆ ಕೇಂದ್ರಾಡಳಿತದ ಸ್ಥಾನಮಾನ ಸಿಗಲಿದೆ ಎಂದು ಗೃಹ ಸಚಿವರು ಹೇಳಿದರು. ಈಗಾಗಲೇ ವಿಧಾನಸಭೆ ಅಸ್ತಿತ್ವದಲ್ಲಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯ ಇನ್ನು ಮುಂದೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಲಿದೆ ಎಂದು ಅವರು ಮಸೂದೆಯ ಉದ್ದೇಶ ವಿವರಿಸಿದರು. ಲಡಾಖ್ ಜನರ ಬಹುದಿನಗಳ ಬೇಡಿಕೆ ಮತ್ತು ಆಶಯ ಸಾಕಾರಗೊಳಿಸಲು ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು. ಜಮ್ಮು ಮತ್ತು ಕಾಶ್ಮೀರ ರಾಜ್ಯದ ಲಡಾಖ್ ವಿಭಾಗವು ದೊಡ್ಡ ವಿಸ್ತಾರ ಪ್ರದೇಶವನ್ನು ಹೊಂದಿದ್ದರೂ ಬಹಳ ವಿರಳ ಜನಸಂಖ್ಯೆ ಹೊಂದಿದೆ, ಲಡಾಖ್ ಜನರ ಬೇಡಿಕೆಯು ದೀರ್ಘ ಕಾಲದಿಂದ ಬಾಕಿ ಉಳಿದಿದ್ದು, ಇದೀಗ ಅವರ ಆಕಾಂಕ್ಷೆ ಈಡೇರಿಸಲು ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಅದರಿಂದ ಉಂಟಾಗುತ್ತಿರುವ ಆಂತರಿಕ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಲಾಗುತ್ತಿದ್ದು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಲಿದ್ದರೂ ಪ್ರತ್ಯೇಕ ವಿಧಾನಸಭೆ ಇರಲಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 